ಬೆಂಗಳೂರು: ನಿನ್ನೆ ಗಣರಾಜ್ಯೋತ್ಸವ ಆಚರಣೆ ವೇಳೆಯಲ್ಲಿ ಬೆಂಗಳೂರು ನಗರದ ಮಾನಿಕ್ ಷಾ ಪರೇಡ್ ಮೈದಾನದಲ್ಲಿ ಭದ್ರತೆಯನ್ನು ಭೇದಿಸಿ ಸಿಎಂ ಸಿದ್ದರಾಮಯ್ಯ ಅವರತ್ತ ನುಗ್ಗಲು ಯತ್ನಿಸಿದ ವ್ಯಕ್ತಿಯ ಮೇಲೆ ವಿರುದ್ಧ ಕಬ್ಬನ್ ಪಾರ್ಕ್ ಠಾಣಾ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಸಾರ್ವಜನಿಕರಲ್ಲಿ ಆತಂಕ ಉಂಟುಮಾಡುವುದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಎಫ್ಐಆರ್ ಪ್ರಕರಣ ದಾಖಲಿಸಲಾಗಿದೆ. ಪರಶುರಾಮ್ 1993ರಲ್ಲಿ ಕೆಪಿಎಸ್ಸಿ ಪರೀಕ್ಷೆ ಬರೆದಿದ್ದರು. ಆದರೆ, ಪರೀಕ್ಷೆ ಫಲಿತಾಂಶವನ್ನು ಸರ್ಕಾರ ತಡೆಹಿಸಿದಿದೆ. ಇದರಿಂದ ಬೇಸತ್ತು ಮನವಿ ಕೊಡಲು ಪ್ರೆಸ್ ಪಾಸ್ ಹಿಡಿದು ಸಿಎಂ ಹತ್ತಿರ ನುಗ್ಗಲು ಯತ್ನಿಸಿದ್ದರು. ಮೊದಲು ಸಿಎಂ ಅವರ ಗಮನ ಸೆಳೆಯಲು ಪತ್ರ ಪ್ರದರ್ಶಿಸಿದ್ದರು. ಸಿಎಂ ಅವರು ಗಮನಿಸಿದಿದ್ದಾಗ ಮೈದಾನಕ್ಕೆ ನುಗ್ಗಲು ಪ್ರಯತ್ನಿಸಿದ್ದರು. ಕೂಡಲೇ ಎಚ್ಚೆತ್ತ ಪೊಲೀಸರು, ಪರುಶರಾಮನನ್ನು ವಶಕ್ಕೆ ಪಡೆದಿದ್ದರು.