ಹಾಸನ: ರಾಜ್ಯ ಸರ್ಕಾರ ವಿರುದ್ಧ ಹೆಚ್.ಡಿ ರೇವಣ್ಣ ವಾಗ್ದಾಳಿ ನಡೆಸಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆ ದೃಷ್ಟಿಯಿಂದ ನಮ್ಮ ರಾಜ್ಯವನ್ನು ತಮಿಳುನಾಡಿಗೆ ಅಡ ಇಟ್ಟಿದ್ದಾರೆ ಎಂದು ಕಿಡಿಕಾರಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ವಿಚಾರದಲ್ಲಿ ಸರ್ಕಾರ ಆರಂಭಿಕ ಹಂತದಲ್ಲೇ ಮುಗ್ಗರಿಸಿದೆ. ಟ್ರಿಬ್ಯೂನಲ್ ಮುಂದೆ ನೀರಿಲ್ಲ ಅನ್ನುತ್ತಾರೆ, ಹೊರಗೆ ಬಂದು ಒಳಹರಿವು 10,000 ಕ್ಯೂಸೆಕ್ ಇದೆ ಅಂತ ಹೇಳ್ತಿದ್ದಾರೆ. CWRC ತೀರ್ಪು ಬರುಬ ಮುಂಚೆಯೇ ಒಳಹರಿವಿನ ಬಗ್ಗೆ ಹೇಳ್ತಿದ್ದಾರೆ. ಮುಂದಿನ ಲೋಕಸಭಾ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ನಮ್ಮ ರಾಜ್ಯವನ್ನು ತಮಿಳುನಾಡಿಗೆ ಅಡ ಇಟ್ಟಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ