ಕೇರಳ: ಕಳೆದ ಕೆಲವು ದಿನಗಳಿಂದ ಕೇರಳದ ಹಲವಾರು ಭಾಗಗಳಲ್ಲಿ ಭಾರಿ ಮಳೆಯಾಗಿದ್ದು, ರಾಜ್ಯದ ವಿವಿಧ ಪ್ರದೇಶಗಳಲ್ಲಿ ಪ್ರವಾಹ ಉಂಟಾಗಿದೆ. ಇದರಿಂದಾಗಿ ಕೊಟ್ಟಾಯಂ, ವೈಕೋಮ್ ಮತ್ತು ಚಂಗನಶ್ಶೇರಿ ತಾಲ್ಲೂಕುಗಳಲ್ಲಿ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಇನ್ನು 17 ಪರಿಹಾರ ಶಿಬಿರಗಳು ಪ್ರವಾಹದಿಂದಾಗಿ ಸುಮಾರು 246 ಜನರಿಗೆ ಆಶ್ರಯ ನೀಡುತ್ತಿವೆ.ಆಲಪ್ಪುಳದಲ್ಲಿ ಪರಿಹಾರ ನಡೆಸುತ್ತಿರುವ ಚೆರ್ತಲಾ ಮತ್ತು ಚೆಂಗನ್ನೂರ್ ತಾಲ್ಲೂಕುಗಳಲ್ಲಿನ ಶಾಲೆಗಳಿಗೆ ರಜೆ ಘೋಷಿಸುವಂತೆ ಜಿಲ್ಲಾಡಳಿತ ತಿಳಿಸಿದೆ.
ಕೇರಳದ ತಿರುವನಂತಪುರಂ, ಕೊಲ್ಲಂ, ಪಥನಂತಿಟ್ಟ, ಅಲಪ್ಪುಳ ಮತ್ತು ಕೊಟ್ಟಾಯಂ ಜಿಲ್ಲೆಗಳಲ್ಲಿ ಇಂದು ಒಂದು ಅಥವಾ ಎರಡು ಸ್ಥಳಗಳಲ್ಲಿ ಲಘು ಮಳೆಯಾಗಲಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.
ತಿರುವನಂತಪುರಂ, ಕೊಲ್ಲಂ, ಪಥನಂತಿಟ್ಟ ಮತ್ತು ಅಲಪ್ಪುಳ ಜಿಲ್ಲೆಗಳಲ್ಲಿ ಐಎಂಡಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. 6 ಸೆಂ.ಮೀ ನಿಂದ 11 ಸೆಂ.ಮೀ ವರೆಗೆ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ.ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಮರಗಳು ಬುಡಮೇಲಾಗಿವೆ, ಜಲಾವೃತಗೊಂಡಿವೆ ಮತ್ತು ಕಾಂಪೌಂಡ್ ಗೋಡೆಗಳು ಕುಸಿದ ಹಲವಾರು ಘಟನೆಗಳು ವರದಿಯಾಗಿವೆ.