ರಾಯಚೂರು: ಜಿಲ್ಲೆಯ ಲಿಂಗಸೂಗೂರಿಗೆ ತಾಲೂಕಿನ ಚಿಕ್ಕ ಉಪ್ಪೇರಿಯಲ್ಲಿ ಕುಡಿಯಲು ಹಣವಿಲ್ಲವೆಂದು ಪತ್ನಿಯನ್ನೇ ಗಂಡ ಹತ್ಯೆ ಮಾಡಿರುವ ಘಟನೆ ನಡೆದಿದೆ.
28 ವರ್ಷದ ಸುನೀತಾ ಮೃತ ಮಹಿಳೆ. ಬಸವರಾಜ ಎಂಬಾತನಿಂದ ಈ ಕೃತ್ಯ ನಡೆದಿದೆ. ಜಮೀನಿನಲ್ಲಿ ಬೆಳಗ್ಗೆ ನೀರು ಬಿಡುವಾಗ ಇಬ್ಬರ ನಡುವೆ ಗಲಾಟೆ ಆಗಿದೆ. ಕುಡಿಯುವುದಕ್ಕೆ ಹಣ ನೀಡುವಂತೆ ಪತ್ನಿಗೆ ಕಿರುಕುಳ ನೀಡಿದ್ದಾನೆ. ಆಗ ಹಣ ಕೊಡದಿದ್ದಕ್ಕೆ ಸಲಾಕೆಯಿಂದ ಹೊಡೆದು ಪತ್ನಿಯನ್ನು ಕೊಲೆ ಮಾಡಲಾಗಿದೆ. ಪ್ರೀತಿಸಿ ಮದುವೆಯಾಗಿದ್ದರು. ಸ್ಥಳಕ್ಕೆ ಲಿಂಗಸ್ಗೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.