Political NewsState News

ರಾಮಮಂದಿರ ಉದ್ಘಾಟನೆ ದಿನ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಸೂಚನೆ-ಗೃಹ ಸಚಿವ ಜಿ. ಪರಮೇಶ್ವರ್

ಬೆಂಗಳೂರು : ರಾಮ ಮಂದಿರ ಉದ್ಘಾಟನೆ ದಿನದಂದು ರಾಜ್ಯದಲ್ಲಿ ಅಹಿತಕರ ಘಟನೆ ಆಗದಂತೆ ನೋಡಿಕೊಳ್ಳಲು ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಜನವರಿ 22 ರಂದು ರಾಜ್ಯದ ರಾಮನ ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ಪೊಲೀಸ್ ಭದ್ರತೆ ವಿಚಾರವಾಗಿ ಸದಾಶಿವನಗರದಲ್ಲಿ ಪ್ರತಿಕ್ರಿಯಿಸಿದ ಅವರು ಎಲ್ಲಾ ಎಸ್ಪಿಗಳಿಗೂ ಅಲರ್ಟ್ ಮಾಡಿದ್ದೇವೆ. ಅಹಿತಕರ ಘಟನೆ ಆಗದಂತೆ ನೋಡಿಕೊಳ್ಳಲು ಸೂಚನೆ ನೀಡಲಾಗಿದೆ. ಪೂಜೆ ಪುರಸ್ಕಾರಗಳು ನಡೆಯಲಿವೆ ಅಂದು, ಪೂಜೆಗೆ ಭಂಗ ಮಾಡಲ್ಲ. ಆದ್ರೆ ಕಾನೂನು ವಿರೋಧಿ ಚಟುವಟಿಕೆ ನಡೆಯದಂತೆ ನೋಡಿಕೊಳ್ಳಲು ಹೇಳಿದ್ದೇವೆ.

ಇನ್ನೂ ಒಳಮೀಸಲಾತಿ ವಿಚಾರವಾಗಿ ಮಾತನಾಡಿ ಈ ಹಿಂದೆ ಚಿತ್ರದುರ್ಗದಲ್ಲಿ ಒಳಮೀಸಲಾತಿ ಕೊಡುವ ನಿರ್ಣಯ ಮಾಡಿದ್ದೆವು. ಸದಾಶಿವ ಆಯೋಗದ ವರದಿಯನ್ನು ಮೊದಲ ಅಧಿವೇಶನದಲ್ಲಿ ಕೊಡೊದಾಗಿ ಹೇಳಿದ್ದೆವು. ಬಿಜೆಪಿ ಸರ್ಕಾರ ಮಾಧುಸ್ವಾಮಿ ನೇತೃತ್ವದಲ್ಲಿ ಸಂಪುಟ ಉಪಸಮಿತಿ‌ ರಚಿಸಿತ್ತು. ಅದರ ಪ್ರಕಾರ ಎಸ್ಸಿ ಸಮುದಾಯದ 101 ಜಾತಿಗಳನ್ನು ನಾಲ್ಕು ಭಾಗ ಮಾಡಿ ಒಳಮೀಸಲು ವರ್ಗೀಕರಣ ಮಾಡಿದ್ರು. ಅವರು ಹಂಚಿಕೆ ಮಾಡಿದ್ದ ಒಳಮೀಸಲಾತಿ ಅವೈಜ್ಞಾನಿಕ ಅಂತ ಅವರಿಗೂ ಗೊತ್ತು. ನಾವು ಕಾನೂನು ಅಭಿಪ್ರಾಯ ಪಡೆದು ಕೇಂದ್ರಕ್ಕೆ ಸಂವಿಧಾನ ತಿದ್ದುಪಡಿ ಮಾಡಿ ಅಂತ ಕೇಂದ್ರಕ್ಕೆ ಶಿಫಾರಸು ಮಾಡಲು ತೀರ್ಮಾನ ಮಾಡಲಾಗಿದೆ.

ನಾವು ಜವಾಬ್ದಾರಿಯಿಂದ ನುಣುಚಿಕೊಂಡಿಲ್ಲ. ಕೇಂದ್ರ ಸರ್ಕಾರ ಸಂವಿಧಾನ ತಿದ್ದುಪಡಿ ಮಾಡಿದ್ರೆ ಒಳ‌ಮೀಸಲಾತಿ ಕೊಡಬಹುದು ಎಂದರು. ಒಳ ಮೀಸಲಾತಿ ರಾಜಕೀಯ ಅಜೆಂಡಾ ಎಂಬ ಬಿಜೆಪಿ ಆರೋಪ ವಿಚಾರವಾಗಿ ಪ್ರತಿಕ್ರಿಯಿಸಿ ಬಿಜೆಪಿಯವರು ಏನೇ ವಿಶ್ಲೇಷಣೆ ಮಾಡಬಹುದು. ಆದ್ರೆ ನಮ್ಮ ಕ್ರಮ ಸರಿಯಾಗಿದೆ. ಮೀಸಲಾತಿ, ಒಳಮೀಸಲಾತಿ ಎಲ್ಲವೂ ಸಂವಿಧಾನದ ಚೌಕಟ್ಟಿನಲ್ಲೇ ಆಗಬೇಕು ಎಂದು ಹೇಳಿದರು.

ವರದಿ : ಬಸವರಾಜ ಹೂಗಾರ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!