ಬೆಂಗಳೂರು: ಕಾಡುಗೋಡಿ ವಿದ್ಯುತ್ ಅವಘಡ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಆರ್ . ಅಶೋಕ್ ಪ್ರತಿಕ್ರಿಯೆ ನೀಡಿದ್ದಾರೆ.
ತಾಯಿ ಮಗು ಸಾವಿಗೆ ಸರ್ಕಾರ ಕಾರಣವಾಗಿದೆ. ಇಂಧನ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವ ಕೆಲಸ ಮಾಡಲಿ.ಮೃತರಿಗೆ ತಲಾ 25 ಲಕ್ಷ ಪರಿಹಾರವನ್ನು ಸರ್ಕಾರ ಕೊಡಲಿ ಎಂದು ಆರ್. ಅಶೋಕ್ ಆಗ್ರಹಿಸಿದ್ದಾರೆ.
ಇನ್ನು ಸಚಿವ ಸತೀಶ್ ಜಾರಕಿಹೊಳಿಯಿಂದ ದುಬೈ ಪ್ರವಾಸ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು,ಹಿಂದೆ ಬೆಳಗಾವಿಯಿಂದ ಸರ್ಕಾರನೇ ಬಿದ್ದು ಹೋಗಿತ್ತು. ಮತ್ತೆ ಬೆಳಗಾವಿ ಬೆಂಕಿ ಜ್ವಾಲೆಯಾಗಿ ದುಬೈವರೆಗೆ ಹೋಗಿದೆ. ಡಿಕೆ ಶಿವಕುಮಾರ್ ಮನೆಗೆ ಹೋದ್ರು ಸತೀಶ್, ಶಾಸಕರನ್ನು ಕರೆದುಕೊಂಡು ಹೋಗಿದ್ದಾರೆ. ಲೋಕಸಭಾ ಚುನಾವಣೆ ನಂತರ ಸರ್ಕಾರ ಇರೋದಿಲ್ಲ. ಕಾಂಗ್ರೆಸ್ಸಿನ ಅವನತಿಗೆ ಇದೆಲ್ಲವೂ ಕಾರಣ. ರಾಜ್ಯದಲ್ಲಿ ಒಬ್ಬರು ಅಲ್ಲ, ಮೂವರು ಸಿಎಂಗಳಿದ್ದಾರೆ. ಮುಂದೆ ಅವರು ಯಾವ ಯಾವ ದಿಕ್ಕಿನಲ್ಲಿ ಹೋಗ್ತಾರೋ ನೋಡೋಣ ಎಂದು ಹೇಳಿದ್ದಾರೆ.