ಆನೇಕಲ್: ಕಳೆದ ಹಿಂದೆ ಅಷ್ಟೇ ಬೊಮ್ಮಾನಹಳ್ಳಿ ಕೂಡ್ಲು ಸುತ್ತಮುತ್ತಲಿನ ಚಿರತೆ ಪ್ರತ್ಯಕ್ಷವಾಗಿದ್ದು ಜನರಲ್ಲಿ ಆತಂಕ ಸೃಷ್ಟಿಸಿತ್ತು.
ಆದ್ರೆ ಇದೀಗ ಅದೇ ಜಾಗದಲ್ಲಿ ಮತ್ತೊಂದು ಚಿರತೆ ಕಾಣಿಸಿಕೊಂಡಿದೆ. ಜನರಲ್ಲಿ ಮತ್ತೆ ನಡುಕ ಶುರುವಾಗಿದೆ. ನಿನ್ನೆ ರಾತ್ರಿ 10.30ರ ಸುಮಾರಿಗೆ ಚಿರತೆ ಕಂಡ ಬಗ್ಗೆ ಪ್ರತ್ಯಕ್ಷದರ್ಶಿ ತಬ್ರೇಜ್ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು ಅರಣ್ಯ ಇಲಾಖೆ ಸಿಬ್ಬಂದಿ ಚಿರತೆ ಹೆಜ್ಜೆ ಗುರುತು ಪತ್ತೆ ಹಚ್ಚುತ್ತಿದ್ದಾರೆ. ಆದಷ್ಟು ಬೇಗ ಚಿರತೆ ಹಿಡಿಯುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.
ನಿನ್ನೆ ಕೂಡ್ಲು ಬಳಿ ರಾತ್ರಿ ಬೈಕ್ ನಲ್ಲಿ ತಬ್ರೇಜ್ ಅವರು ಹೋಗುತ್ತಿದ್ದ ಚಿರತೆ ಪ್ರತ್ಯಕ್ಷವಾಗಿದೆ. ಯುವಕ ಈ ಬಗ್ಗೆ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾನೆ. ಕೂಡ್ಲುಗೇಟ್ ಬಳಿಯ AECS ಲೇವೇಟ್ ಹಾಗೂ ಎಂಎಸ್ ದೋನಿ ಸ್ಕೂಲ್ ಬಳಿ ಚಿರತೆ ಕಂಡ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ನಿನ್ನೆ ರಾತ್ರಿಯೇ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ.