ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಕೊಂಡಿದ್ದು, ದೇಶಾದ್ಯಂತ ಹಲವಾರು ರಾಜ್ಯಗಳಲ್ಲಿ ಮುಂದಿನ 4-5 ದಿನಗಳವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯ ಜಿಲ್ಲೆಗಳಾದ ದಕ್ಷಿಣ ಕನ್ನಡ ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಹಾಗೆಯೇ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲೂ ಮಳೆಯಾಗುವ ಸಾಧ್ಯತೆ ಇದೆ.
ಕ್ಯಾಸಲ್ರಾಕ್, ಪುತ್ತೂರು, ಕುಂದಾಪುರ, ಗೇರುಸೊಪ್ಪ, ಸಿದ್ದಾಪುರ, ಮಾಣಿ, ಕದ್ರಾ, ಗೇರುಸೊಪ್ಪ, ಶೃಂಗೇರಿ, ಕಾರ್ಕಳ, ಧರ್ಮಸ್ಥಳ, ಸುಳ್ಯ, ಬೆಳ್ತಂಗಡಿ, ಸಿದ್ದಾಪುರ, ಜಯಪುರ, ಮಂಗಳೂರು ವಿಮಾನ ನಿಲ್ದಾಣ, ಕೊಟ್ಟಿಗೆಹಾರ, ಕೊಪ್ಪ, ಕಳಸ, ಯಡ್ರಾಮಿ, ಸೋಮವಾರಪೇಟೆ, ಬೆಳೆಹೊನ್ನೂರು, ಕಮ್ಮರಡಿ, ತ್ಯಾಗರ್ತಿ, ಮಂಡಗದ್ದೆ, ಹುಂಚದಕಟ್ಟೆ, ಸಕಲೇಶಪುರ, ಚನ್ನಗಿರಿಯಲ್ಲಿ ಮಳೆಯಾಗಿದೆ.
ಉತ್ತರಾಖಂಡ, ಉತ್ತರ ಉತ್ತರ ಪ್ರದೇಶ, ಬಿಹಾರ, ಉಪ-ಹಿಮಾಲಯ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಮುಂದಿನ 4-5 ದಿನಗಳಲ್ಲಿ ಪ್ರತ್ಯೇಕವಾದ ಭಾರೀ ಮತ್ತು ಅತಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಪೂರ್ವ ಉತ್ತರ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಭಾನುವಾರದಿಂದ ಆಗಸ್ಟ್ 8 ರವರೆಗೆ ಪ್ರತ್ಯೇಕವಾದ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.