ಬೆಂಗಳೂರು: ರಿಪಬ್ಲಿಕ್ ಆಫ್ ಭಾರತ್ ಎಂಬ ಹೆಸರು ನಾಮಕರಣ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಭಾರತ್ ಎಂದು ಹೊಸ ಹೆಸರು ಇಡುವ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಈಗಾಗಲೇ ಇಂಡಿಯಾ ಎಂಬ ಪದವನ್ನು ಒಪ್ಪಿಕೊಂಡಿದ್ದಾರೆ. ಹೀಗಾಗಿ ಭಾರತ್ ಎಂಬ ಹೊಸ ಹೆಸರು ಅವಶ್ಯಕತೆ ಇಲ್ಲ ಎಂದರು. ರಿಪಬ್ಲಿಕ್ ಆಫ್ ಇಂಡಿಯಾ ಎಂಬ ಪದ ಸಂವಿಧಾನದಲ್ಲಿ ಹೇಳಲಾಗಿದೆ.
ಇತ್ತ, ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ರಿಪಬ್ಲಿಕ್ ಆಫ್ ಭಾರತ್ ಮರುನಾಮಕರಣ ಮಾಡುತ್ತಿರುವುದು ಸ್ವಾಗತಾರ್ಹವಾಗಿ ಎಂದು ಪ್ರತಿಕ್ರಿಯೆ ನೀಡಿದ್ದಾರೆ.
ಭಾರತೀಯ ಹೆಸರು ಹಿಂಧೂ ಧರ್ಮದ ಹೆಸರಗಳನ್ನು ಇಡಲಾಗುತ್ತಿದೆ. ಭಾರತ ಎಂಬುದು ಸ್ವಾಭಿಮಾನದ ಅರ್ಥ ಬರುವ ಶಬ್ದವಾಗಿದೆ. ರಿಪಬ್ಲಿಕ್ ಆಫ್ ಭಾರತ ನಾಮಕರಣವನ್ನು ಶ್ರೀ ರಾಮ ಸೇನೆ ಸಂಘಟನೆಯಿಂದ ಸ್ವಾಗತ ಮಾಡುತ್ತೇನೆ ಎಂದರು.