ಬೆಂಗಳೂರು: ಐಟಿ ದಾಳಿಯಲ್ಲಿ ಸಿಕ್ಕಿರುವ ಹಣ ಯಾರದ್ದು ಅಂತ ತನಿಖೆಯಿಂದ ಗೊತ್ತಾಗುತ್ತೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳು ನಿಂತಿವೆ.ನೀರಾವರಿ ಯೋಜನೆಗಳು, ರಸ್ತೆ ಕಾಮಗಾರಿಗಳು ನಿಂತಿವೆ. ಎಲ್ಲ ಕಡೆ ವಿದ್ಯುತ್ ಕಣ್ಣಾಮುಚ್ಚಾಲೆ ಇದೆ.ರೈತರು ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ಎಲ್ಲ ಕಡೆ ವಿದ್ಯುತ್ ಕಣ್ಣಾಮುಚ್ಚಾಲೆ ಇದೆ.ಒಂದು ಕಡೆ ಬರಗಾಲವಿದೆ. ಈ ನಡುವೆಯೇ ರೈತರಿಗೆ ವಿದ್ಯುತ್ ಸಮಸ್ಯೆ ಆಗದಂತೆ ಸರ್ಕಾರ ನೋಡಿಕೊಳ್ಳಲಿ ಎಂದರು.
ಐಟಿ ದಾಳಿ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ಐಟಿ ದಾಳಿಯಲ್ಲಿ ಹಣ ಸಿಕ್ಕಿರೋದು ಯಾರದ್ದು ಅಂತ ತನಿಖೆ ನಂತರ ಗೊತ್ತಾಗುತ್ತೆ. ಕಾಂಗ್ರೆಸ್ ನವ್ರು ಚುನಾವಣೆಗೆ ಹಣ ಸಂಗ್ರಹ ಮಾಡ್ತಿದೆ ಅಂತವ ಖುದ್ದು ಪ್ರಹ್ಲಾದ್ ಜೋಷಿ ಆರೋಪ ಮಾಡಿದಾರೆ.ಈ ಸರ್ಕಾರ ಹಣ ಸಂಗ್ರಹ ಮಾಡ್ತಿದೆ, ಅಭಿವೃದ್ಧಿ ಕಡೆ ಗಮನ ಕೊಡ್ತಿಲ್ಲ.ಇದನ್ನು ನಾನು ಖಂಡಿಸ್ತೇನೆ, ಸರ್ಕಾರ ಅಭಿವೃದ್ಧಿ ಕಡೆ ಗಮನ ಕೊಡಲಿ.ಇಡಿಯವ್ರು ತನಿಖೆ ಮಾಡಬೇಕು ಅಂತ ಎಲ್ರೂ ಆಗ್ರಹ ಮಾಡ್ತಿದಾರೆ. ಅದೇ ರೀತಿ ನಾನು ಕೂಡ ಆಗ್ರಹ ಮಾಡುತ್ತಿದ್ದೇನೆ ಎಂದರು