ಮಂಗಳೂರು: ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದ್ದು,ಕಾರು ನುಜ್ಜುಗುಜ್ಜಾಗಿದೆ. ಈ ಅಪಘಾತದಿಂದ ಕಾರು ಚಾಲಕನಿಗೆ ಗಂಭೀರವಾಗಿದ್ದು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಮಂಗಳೂರಿನ ಜೆಪ್ಪಿನ ಮೊಗರಿ ಬಳಿ ಮಿನಿ ಬಸ್ ಲಾರಿ , ಖಾರು , ಬಸ್ಸಿನ ನಡುವೆ ಅಪಘಾತ ಸಂಭವಿಸದೆ. ಹಠಾತ್ ಬ್ರೇಕ್ ಹಾಕಿದ ಪರಿಣಾಮ ಈ ಅವಘಡ ಸಂಭವಿಸಿದೆ. ಸಡನ್ ಬ್ರೇಕ್ ಹಾಕಿದ ಕಾರಿಗೆ ಹಿಂದಿನಿಂದ ಬಂದ ಲಾರಿ ಡಿಕ್ಕಿಯಾಗಿದ್ದು, ಅದರ ಹಿಂದೆ ಇದ್ದ ಕಾರು ಸಡನ್ ಬ್ರೇಕ್ ಹಾಕಿದ್ದಾರೆ. ಆದರೆ ದುರಂತವೆಂಬಂತೆ ವೇಗದಲ್ಲಿದ್ದ ಕೇರಳ ಸಾರಿಗೆ ಬಸ್, ನಿಲ್ಲಿಸಿದ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ಪಲ್ಟಿಯಾಗಿದೆ.
ಈ ವೇಳೆ ಕಾರಿನಲ್ಲಿ ತಲಪಾಡಿ ನಿವಾಸಿ ಮಂಗಳೂರಿನ ಎಂಸಿಎಫ್ ಉದ್ಯೋಗಿ ದಿನೇಶ್ ಎಂಬುವವರು ಸಿಲುಕಿದ್ದಾರೆ. ಇನ್ನು ಈ ಭೀಕರ ಅಪಘಾತದ ದೃಶ್ಯ ಸ್ಥಳೀಯ ಮನೆಯೊಂದರ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಘಟನೆ ಸಂಬಂಧ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.