State News

ಪ್ರೀತಿಗೆ ಮನೆಯವರೇ ಅಡ್ಡಿ: ಮನನೊಂದು ಯುವತಿ ಆತ್ಮಹತ್ಯೆ

ಬೆಂಗಳೂರು: ಬೆಂಗಳೂರಿನ ಟಿ. ದಾಸರಹಳ್ಳಿಯಲ್ಲಿ ಯುವತಿಯೊಬ್ಬಳು ತನ್ನ ಪ್ರೀತಿಗೆ ಮನೆಯವರೇ ಅಡ್ಡಿಯಾದ ಕಾರಣಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾಳೆ.

20 ವರ್ಷದ ಸ್ನೇಹ ಆತ್ಮಹತ್ಯೆ ಮಾಡಕೊಂಡ ಯುವತಿ. ಇವರು ನೆಲಮಂಗಲ ಬಸವೇಶ್ವರ ಪದವಿ ಕಾಲೇಜಿನಲ್ಲಿ ಬಿಕಾಂ ಓದುತ್ತಿದ್ದು, ಈ ವೇಳೆ ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದ ಮಂಡ್ಯ ಮೂಲದ ಪ್ರೀಯಕರ ಸಂತೋಷ್ ಎಂಬಾತನನ್ನು​ ಪ್ರೀತಿಸುತ್ತಿದ್ದಳು. ಆದರೆ, ಇದಕ್ಕೆ ಮನೆಯವರು ವಿರೋಧ ಪಡಿಸಿದ ಹಿನ್ನಲೆ ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಘಟನೆ ಹಿನ್ನೆಲೆ…!

ಆಗಸ್ಟ್​ 16 ರಂದು ಕಾಲೇಜಿನಿಂದಲೇ ಸ್ನೇಹ, ಯುವಕನೊಂದಿಗೆ ಪರಾರಿಯಾಗಿದ್ದನು. ಈ ಸಂಬಂಧ ನೆಲಮಂಗಲ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಂತರ ಮೂರು ದಿನಗಳ ಬಳಿಕ ಜೋಡಿಯನ್ನು  ಪೊಲೀಸರು ಮಂಡ್ಯದಲ್ಲಿ ಪತ್ತೆ ಹಚ್ಚಿದರು. ಆ ಬಳಿಕ ಯುವತಿ ಪೋಷಕರು ಸ್ನೇಹಳನ್ನು ನೆಲಮಂಗಲದಿಂದ ಅಜ್ಜಿ ಮನೆಗೆ ಕಳುಹಿಸಿದ್ದರು.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!