Breaking News CM ಸಿದ್ದರಾಮಯ್ಯ ಪರ ಅಶೋಕ್ ಬ್ಯಾಟಿಂಗ್.!Political NewsState News

Yuva Nidhi Scheme: ಯುವ ನಿಧಿ ಯೋಜನೆಗೆ ಇಂದು ಚಾಲನೆ ನೀಡಲಿರುವ ಸಿಎಂ, ಡಿಸಿಎಂ

ಕಾಂಗ್ರೆಸ್ ಸರ್ಕಾರದ ಐದನೇ ಗ್ಯಾರಂಟಿ ಯೋಜನೆ ಯುವ ನಿಧಿಗೆ (Yuva Nidhi scheme) ಇಂದು (ಶುಕ್ರವಾರ, ಜನವರಿ 12) ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಚಾಲನೆ ನೀಡಲಿದ್ದಾರೆ.

ಲೋಕಸಭೆ ಚುನಾವಣೆ ಹತ್ತಿರವಾಗ್ತಿರುವ ಸಂದರ್ಭದಲ್ಲಿ 5ನೇ ಗ್ಯಾರಂಟಿ ಯೋಜನೆಯಾದ ಯುವ ನಿಧಿಯನ್ನು ಜಾರಿಗೆ ತರುತ್ತಿದೆ. ಈಗಾಗಲೇ ಯುವನಿಧಿ ಯೋಜನೆಗೆ ನೋಂದಣಿ ಪ್ರಕ್ರಿಯೆ ಚಾಲನೆ ಸಿಕ್ಕಿದೆ ಎನ್ನಲಾಗಿದೆ. ಆನ್‌ಲೈನ್ ಮೂಲಕ ಈವರೆಗೆ 70 ಸಾವಿರಕ್ಕೂ ಹೆಚ್ಚು ಪದವಿ ಹಾಗೂ ಡಿಪ್ಲೊಮಾ ಅಭ್ಯರ್ಥಿಗಳಿಂದ ನೋಂದಣಿ ಮಾಡಿಕೊಳ್ಳಲಾಗಿದೆ. ನೋಂದಣಿ ಮಾಡಿಕೊಂಡವರ ಫಲಾನುಭವಿಗಳ ಖಾತೆಗೆ ಹಣವನ್ನು ವರ್ಗಾಯಿಸುವ ಪ್ರಕ್ರಿಯೆಗೆ ಅಧಿಕೃತವಾಗಿ ಚಾಲನೆ ನೀಡಲಾಗುತ್ತಿದೆ.

ಯುವ ನಿಧಿ ಯೋಜನೆಗೆ ಅರ್ಹತೆ :

  • ಅಭ್ಯರ್ಥಿಯು ಕರ್ನಾಟಕದ ನಿವಾಸಿಯಾಗಿರಬೇಕು.
  • ಫಲಾನುಭವಿಯು 2023 ರಲ್ಲಿ ಪದವಿ/ಡಿಪ್ಲೊಮಾ ಪಡೆದಿರಬೇಕು ಮತ್ತು ಕನಿಷ್ಠ 180 ದಿನಗಳವರೆಗೆ ಯಾವುದೇ ಸಂಸ್ಥೆಯಲ್ಲಿ ಉದ್ಯೋಗಿಯಾಗಿ ಇದ್ದಿರಬಾರದು.

ಯುವ ನಿಧಿ ನೋಂದಣಿಗೆ ಅಗತ್ಯ ದಾಖಲೆಗಳು :

  • ಎಸ್‌ಎಸ್‌ಎಲ್‌ಸಿ, ಪದವಿ, ಡಿಪ್ಲೊಮಾ ಪೂರ್ಣಗೊಳಿಸಿದ ಅಭ್ಯರ್ಥಿಗಳು ಪ್ರಮಾಣಪತ್ರಗಳೊಂದಿಗೆ 8, 9 ಮತ್ತು 10 ನೇ ಅಂಕಪಟ್ಟಿ ಸಲ್ಲಿಸಬಹುದು.
  • ಅಭ್ಯರ್ಥಿಗಳು ಆಧಾರ್ ಕಾರ್ಡ್, ಮೊಬೈಲ್ ಸಂಖ್ಯೆ ಮತ್ತು ಆಧಾರ್-ಲಿಂಕ್ ಮಾಡಿದ ಬ್ಯಾಂಕ್ ಖಾತೆಯನ್ನು ಹೊಂದಿರಬೇಕು.

ಯುವ ನಿಧಿಗಾಗಿ ಎಲ್ಲಿ ಅರ್ಜಿ ನೋಂದಾವಣೆ ?

  • ಅರ್ಜಿ ಸಲ್ಲಿಸಲು ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್, ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ಪಿಯುಸಿ ಅಂಕಪಟ್ಟಿ, ಪದವಿ ಪ್ರಮಾಣ ಪತ್ರಗಳು ಹಾಗೂ ರೇಷನ್ ಕಾರ್ಡ್ ಅಗತ್ಯವಾಗುತ್ತದೆ. ಅರ್ಜಿಯನ್ನು ಕರ್ನಾಟಕ ಒನ್, ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರ, ಸೇವಾಸಿಂಧು ಪೋರ್ಟಲ್ ನಲ್ಲಿ ಸಲ್ಲಿಸಬಹುವುದು.
  • ಅರ್ಹ ಅಭ್ಯರ್ಥಿಗಳು ಯುವ ನಿಧಿ ಯೋಜನೆಗಾಗಿ ಸೇವಾಸಿಂಧು ಪೋರ್ಟಲ್, ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರ ಅಥವಾ ಕರ್ನಾಟಕ ಒನ್ ಕೇಂದ್ರಗಳಲ್ಲಿ ನೋಂದಾಯಿಸಿಕೊಳ್ಳಬಹುದು.
  • ಪ್ರತಿ ತಿಂಗಳ 25 ನೇ ತಾರೀಖಿನ ಮೊದಲು ನೋಂದಾಯಿಸುವ ಅಭ್ಯರ್ಥಿಗಳು ಆ ನಿರ್ದಿಷ್ಟ ತಿಂಗಳಿಗೆ ಹಣವನ್ನು ಪಡೆಯುತ್ತಾರೆ. 25 ರ ನಂತರ ಅರ್ಜಿ ಸಲ್ಲಿಸುವವರನ್ನು ಮುಂದಿನ ತಿಂಗಳಿಗೆ ಪರಿಗಣಿಸಲಾಗುತ್ತದೆ ಎಂದು ಮಾಹಿತಿ ಇದೆ.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!