ಚುನಾವಣಾ ಪ್ರಕ್ರಿಯೆಯನ್ನ ಭ್ರಷ್ಟಾಚಾರಗೊಳಿಸುವ ಹುನ್ನಾರ ಆರೋಪದ ಹಿನ್ನಲೆ ಚುನಾವಣಾ ಆಯೋಗಕ್ಕೆ ದೂರು ನೀಡಲು ಕಾಂಗ್ರೆಸ್ ಮುಂದಾಗಿದೆ.
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ( D.K SHIVKUMAR ) ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ( SIDDARAMAIAH ) ಸೇರಿ ಹಲವು ಮುಖಂಡರಿಂದ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ.
ದೂರು ನೀಡುವ ಮುನ್ನ ಪ್ರತಿ ನಡೆಸುವ ಸಾಧ್ಯತೆ ಹಿನ್ನಲೆ ಹೆಚ್ಚುವರಿ ಪೊಲೀಸರನ್ನ ಭದ್ರತೆಗೆ ನಿಯೋಜನೆ ಮಾಡಲಾಗಿದೆ. ಬ್ಯಾರಿಕೇಡ್ ಹಾಕಿ ಬಂದೋಬಸ್ತ್ ಮಾಡಿದ್ದಾರೆ ಪೊಲೀಸರು. ನಿನ್ನೆ ಪ್ರತಿಭಟನೆ ಮಾಡುವುದಾಗಿ ಹೇಳಿದ್ದ ಸಿದ್ದರಾಮಯ್ಯ ಹೇಳಿದ್ದರು. ಇದನ್ನೂ ಓದಿ : – ತಿಹಾರ್ ಜೈಲಿನಲ್ಲಿ ಸತ್ಯೇಂದ್ರ ಜೈನ್ ಗೆ ಮಸಾಜ್– ವೀಡಿಯೋ ಬಿಡುಗಡೆ
ಹೀಗಾಗಿ ಹೆಚ್ಚುವರಿ ಪೊಲೀಸರ ನಿಯೋಜನೆ ಮಾಡಲಾಗಿದೆ. ಕಾಂಗ್ರೆಸ್ ದೂರು ನೀಡುವ ಮುನ್ನವೇ ಬಿಜೆಪಿ ದೂರು ನೀಡಲು ಚಿಂತನೆ ನಡೆಸಿದೆ. ಕಾಂಗ್ರೆಸ್ ವಿರುದ್ದ ಆಯೋಗಕ್ಕೆ ಬಿಜೆಪಿ MLC ಎನ್.ರವಿಕುಮಾರ್ ಮತ್ತು ಛಲವಾದಿ ನಾರಾಯಣ ಸ್ವಾಮಿ ದೂರು ನೀಡಲಿದ್ದಾರೆ.
ಕಾಂಗ್ರೆಸ್ – ಬಿಜೆಪಿ ಏಕಕಾಲದಲ್ಲಿ ಚುನಾವಣೆ ಆಯೋಗಕ್ಕೆ ದೂರು ನೀಡುವ ಹಿನ್ನೆಲೆ ಚುನಾವಣೆ ಆಯೋಗಕ್ಕೆ ಬಿಗಿ ಪೋಲಿಸ್ ಬಂದೋಬಸ್ತ್ ಮಾಡಲಾಗಿದೆ.
ಇದನ್ನೂ ಓದಿ : – ಊರುಕುಂಟೆ ಮಿಟ್ಟೂರು ಗ್ರಾಮದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಗ್ರಾಮ ವಾಸ್ತವ್ಯ..!