ರಾಜ್ಯದಲ್ಲಿ ಇಂದು ಕೂಡ ಗುಡುಗು ಸಹಿತ ಭಾರಿ ಮಳೆಯಾಗಲಿದೆ – ಹವಮಾನ ಇಲಾಖೆ ಮುನ್ಸೂಚನೆ

ರಾಜ್ಯದಲ್ಲಿ ಇಂದು ಕೂಡ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನಲ್ಲಿ ಮತ್ತು ಉತ್ತರ ಒಳನಾಡಿನ ಹಲವು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಕರಾವಳಿ ಕರ್ನಾಟಕ( karnataka ) ದ ಬಹುತೇಕ ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಸೂಚಿಸಲಾಗಿದೆ.


ಬೆಂಗಳೂರಿನ ಬಹುತೇಕ ಕಡೆ ಕಗ್ಗತ್ತಲು ಆವರಿಸಿದ್ದು, ಬಸವನಗುಡಿ ( basavanagudi ) ಹನುಮಂತನಗರ, ಇಟ್ಟಮಡು, ಗಿರಿನಗರ, ಶ್ರೀನಗರ, ಜಯನಗರ, ಬನಶಂಕರಿ, ದೇವೇಗೌಡ ಪೆಟ್ರೋಲ್ ಬಂಕ್, ಕತ್ತರಿಗುಪ್ಪೆ, ಸೇರಿದಂತೆ ಬೆಂಗಳೂರಿನ ಹಲವೆಡೆ ಸಂಜೆ 6 ಗಂಟೆಯ ರೀತಿ ಕತ್ತಲ ವಾತಾವರಣ ಗೋಚರವಾಗಿದೆ.

ಭಾರಿ ಮಳೆಯಿಂದ ನಿರ್ಮಾಣ ಹಂತದ ಹೈವೇ ಕೆರೆಯಂತಾಗಿದ್ದು, ಬೆಂಗಳೂರು-ಮೈಸೂರು ಮಾರ್ಗದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಕಳೆದೊಂದು ಗಂಟೆಯಿಂದ ವಾಹನಗಳು ನಿಂತಲ್ಲೇ ನಿಂತಿವೆ. ಅಷ್ಟೇ ಅಲ್ಲದೇ ಕೆಂಗೇರಿ, ಬಿಡದಿ ಭಾಗದಲ್ಲಿ ತುಂತೂರು ಮಳೆ ಆರಂಭವಾಗಿದ್ದು, ವಾಹನ ಸವಾರರು ಟ್ರಾಫಿಕ್ ನಲ್ಲಿ ಸಿಲುಕಿ ಪರದಾಡುತ್ತಿದ್ದಾರೆ.

ಇದನ್ನೂ ಓದಿ : – ಮಳೆಯಿಂದ ಹಾನಿಗೊಳಗಾದ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ ಸಿಎಂ ಬೊಮ್ಮಾಯಿ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!