ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವ ಆಚರಣೆಗೆ ಸಿದ್ದತೆಗಳು ಜೋರಾಗಿವೆ. ಚಾಮರಾಜಪೇಟೆ ( chamarajpette ) ಮೈದಾನದಲ್ಲಿಕಳೆದ ಬಾರಿ ಧ್ವಜ ಹಾರಿಸಲು, ಗಣೇಶ ಕೂರಿಸಲು ಶುರುವಾಗಿದ್ದ ಗಲಾಟೆ ಈಗ ಮತ್ತೆ ಶುರುವಾಗಿದೆ.
ಚಾಮರಾಜಪೇಟೆ ಮೈದಾನದಲ್ಲಿ ರಾಜ್ಯೋತ್ಸವ ಆಚರಣೆಗಾಗಿ ಅನುಮತಿ ನೀಡುವಂತೆ ಕೋರಿ ಚಾಮರಾಜಪೇಟೆ ನಾಗರಿಕ ಒಕ್ಕೂಟದಿಂದ ಮತ್ತೊಂದು ಪತ್ರ ಬರೆಯಲಾಗಿದೆ. ಇದನ್ನೂ ಓದಿ :- ಗುಂಡಿ ತಪ್ಪಿಸುವ ಯತ್ನದಲ್ಲಿ ಕೆಳಗೆ ಬಿದ್ದಿದ್ದ ಉಮಾದೇವಿ ನಿಧನ
ಚಾಮರಾಜಪೇಟೆ ನಾಗರಿಕ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಎಸ್.ರುಕ್ಮಾಂಗದ ಇಂದು ಬೆಂಗಳೂರು ನಗರ ಡಿಸಿಗೆ ಮತ್ತೊಂದು ಪತ್ರ ಬರೆದಿದ್ದಾರೆ. ನ.1ರಿಂದ 30ರವರೆಗೆ ರಾಜ್ಯೋತ್ಸವ ಆಚರಣೆಗೆ ಅನುಮತಿ ನೀಡಿ. ರಾಜ್ಯೋತ್ಸವ ಹಿನ್ನೆಲೆ ಧ್ವಜಾರೋಹಣ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಚರಿಸಬೇಕು ಎಂದು ಕೋರಿ ಪತ್ರ ಬರೆದಿದ್ದಾರೆ.
ಇದನ್ನೂ ಓದಿ :- RESEVATION | ಒಕ್ಕಲಿಗರ ಸಮುದಾಯದ ಮೀಸಲಾತಿ ಹೆಚ್ಚಿಸುವಂತೆ ನಿರ್ಮಲಾನಂದನಾಥ ಸ್ವಾಮೀಜಿ ಆಗ್ರಹ