ನ.1ರಿಂದ ಜೆಡಿಎಸ್ ( JDS ) ಪಂಚರತ್ನ ಜನಸಂಪರ್ಕ ರಥಯಾತ್ರೆ ಆರಂಭವಾಗುತ್ತಿದ್ದು ಮೊದಲ ಹಂತದ ಪಂಚರತ್ನ ರ( PANCHRATHNA ) ಥಯಾತ್ರೆಯ ಪಟ್ಟಿ ಬಿಡುಗಡೆ ಮಾಡಲಾಗಿದೆ. ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ರಥಯಾತ್ರೆ ನಡೆಯಲಿದೆ. ಉದ್ಯೋಗ, ಶಿಕ್ಷಣ, ನೀರಾವರಿ, ಕೃಷಿ, ಆರೋಗ್ಯ ಸೇರಿದಂತೆ ಪಂಚಯಾತ್ರೆಯಲ್ಲಿ ಈ ಬಗ್ಗೆ ಯೋಜನೆ ರೂಪಿಸಲಾಗಿದೆ.
ನ.1ರಿಂದ ಕೋಲಾರ ( KOLARA ) ಜಿಲ್ಲೆಯ ಮುಳಬಾಗಿಲಿನಿಂದ ರಥಯಾತ್ರೆ ಆರಂಭವಾಗುತ್ತೆ. ನವೆಂಬರ್ 6 ರಿಂದ 10ರವರೆಗೆ ಚಿಕ್ಕಬಳ್ಳಾಪುರದಲ್ಲಿ ರಥಯಾತ್ರೆ ನಡೆಯುತ್ತೆ. ನ.11ರಿಂದ 13ರವರೆಗೆ ಬೆಂಗಳೂರು ಗ್ರಾ. ಜಿಲ್ಲೆಯಲ್ಲಿ ಸಂಚಾರ ನ.14ರಿಂದ 23ರವರೆಗೆ ತುಮಕೂರು ಜಿಲ್ಲೆಯಲ್ಲಿ ರಥಯಾತ್ರೆ ನ.24 ರಿಂದ 30ರವರೆಗೆ ಹಾಸನ ಜಿಲ್ಲೆಯಲ್ಲಿ ರಥಯಾತ್ರೆ ಡಿ.1ರಂದು ಕುಣಿಗಲ್ ( KUNIGAL ) ಕ್ಷೇತ್ರದಲ್ಲಿ ಸಂಚರಿಸಲಿರುವ ರಥಯಾತ್ರೆ ಡಿ.2ರಿಂದ 5ರವರೆಗೆ ರಾಮನಗರ ಜಿಲ್ಲೆಯಲ್ಲಿ ರಥಯಾತ್ರೆ ಮೊದಲ ಹಂತದಲ್ಲಿ 35 ದಿನಗಳ ಕಾಲ ರಥಯಾತ್ರೆ ನಡೆಯಲಿದೆ. ಈ ರಥಯಾತ್ರೆ ಮೂಲಕ ಎರಡು ರಾಷ್ಟ್ರೀಯ ಪಕ್ಷಗಳಿಗೆ ಟಕ್ಕರ್ ಕೊಡಲು JDS ಪ್ಲ್ಯಾನ್ ಮಾಡಿಕೊಂಡಿದೆ. ಪಂಚರತ್ನ ರಥಯಾತ್ರೆ ಮೂಲಕ ಅಧಿಕಾರಕ್ಕೆ ಏರಲು ಪ್ಲ್ಯಾನ್ ಮಾಡಿದೆ.
ಇದನ್ನೂ ಓದಿ : – Kharge – ಕಾಂಗ್ರೆಸ್ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಅಧಿಕಾರ ಸ್ವೀಕಾರ- ಸೋನಿಯಾ, ರಾಹುಲ್ ಗಾಂಧಿ ಅಭಿನಂದನೆ