ಕೆಂಪೇಗೌಡ ಆಟದ ಮೈದಾನ (Kempegowda ground) ಉಳಿಸಲು ಬೆಂಗಳೂರಿನ ರಾಜರಾಜೇಶ್ವರಿ ನಗರದ ನಿವಾಸಿಗಳು ಪ್ರತಿಭಟನೆ ನಡೆಸಿದ್ದಾರೆ. ಆಟದ ಮೈದಾನದಲ್ಲಿ ಶಾಲೆ ನಿರ್ಮಾಣಕ್ಕೆ ವಿರೋಧ ವ್ಯಕ್ತ ಪಡಿಸಿದ್ದಾರೆ. ಕರ್ನಾಟಕ ಸರ್ಕಾರ ಆಟದ ಮೈದಾನದಲ್ಲಿ ಶಾಲೆಯನ್ನು ನಿರ್ಮಿಸಲು ಮುಂದಾಗಿದೆ.
1.6 ಎಕರೆ ವಿಸ್ತೀರ್ಣದ ಕೆಂಪೇಗೌಡ ಮೈದಾನ ಸರ್ವೆ ಸಂಖ್ಯೆ 223 ಮತ್ತು 224, ಹಲಗೆವಡೇರಹಳ್ಳಿ, ಕೆಂಗೇರಿ ಹೋಬಳಿ, ಬೆಂಗಳೂರು ದಕ್ಷಿಣ, ಎಲ್ಲಾ ವಯಸ್ಸಿನ ಜನರಿಗೆ ಕ್ರೀಡಾ ಚಟುವಟಿಕೆಗಳಿಗೆ ಲಭ್ಯವಿರುವ ಏಕೈಕ ಸ್ಥಳವಾಗಿದೆ. ಕೆಂಪೇಗೌಡ ಆಟದ ಮೈದಾನವನ್ನು ಮಾಜಿ ಮುಖ್ಯಮಂತ್ರಿ ಬಿ .ಎಸ್ ಯಡಿಯೂರಪ್ಪನವರು 2006 ರಲ್ಲಿ ಉದ್ಘಾಟಿಸಿದ್ರು. ಯುವಕರು ತಮ್ಮ ಕ್ರೀಡಾ ಮಹತ್ವಾಕಾಂಕ್ಷೆಗಳನ್ನು ಮುಂದುವರಿಸಲು ಸ್ಥಳಾವಕಾಶದಿಂದ ವಂಚಿತರಾಗುತ್ತಾರೆ ಎಂದು ನಿವಾಸಿಗಳು ಅಸಮಾಧಾನ ಹೊರಹಾಕಿದ್ದಾರೆ. 155 ಎಕರೆ ವಿಸ್ತೀರ್ಣದ ವಸತಿ ಬಡಾವಣೆಯಲ್ಲಿ ಲಭ್ಯವಿರುವ ಯಾವುದೇ ನಾಗರಿಕ ಸೌಲಭ್ಯಗಳ ಖಾಲಿ ಜಾಗದಲ್ಲಿ ಶಾಲೆ ನಿರ್ಮಿಸಲು ನಿವಾಸಿಗಳಿಂದ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಇದನ್ನೂ ಓದಿ : – ರಾಜೀವ್ ಗಾಂಧಿ ಕುಟುಂಬದ ಕ್ಷಮೆ ಕೋರುವೆ – ನಳಿನಿ ಶ್ರೀಹರನ್