ಬೆಂಗಳೂರಿಗೆ ಬಂದಿಳಿದ ಸೂಪರ್ ಸ್ಟಾರ್ ರಜನಿಕಾಂತ್

ದಿವಂಗತ ಪುನೀತ್ ರಾಜ್ ಕುಮಾರ್ ( PUNEETH RAJKUAMR )ಅವರಿಗೆ ಇಂದು ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದ್ದು,

ದಿವಂಗತ ಪುನೀತ್ ರಾಜ್ ಕುಮಾರ್ ( PUNEETH RAJKUAMR )ಅವರಿಗೆ ಇಂದು ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದ್ದು, ಅತಿಥಿಗಳಾಗಿ ಸೂಪರ್ ಸ್ಟಾರ್ ರಜನಿಕಾಂತ್ ಮತ್ತು ತೆಲುಗಿನ ಸ್ಟಾರ್ ನಟ ಜ್ಯೂನಿಯರ್ ಎನ್.ಟಿ.ಆರ್ ಹಾಗೂ ಸುಧಾಮೂರ್ತಿ ಆಗಮಿಸುತ್ತಿದ್ದಾರೆ.

ಸಂಜೆ 4 ಗಂಟೆಗೆ ವಿಧಾನ ಸೌಧ ( VIDHAN SOUDHA )ಮುಂಭಾಗದಲ್ಲಿ ಬೃಹತ್ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಇದನ್ನೂ ಓದಿ : – LPG ಸಿಲಿಂಡರ್ ಬೆಲೆಯಲ್ಲಿ ಇಳಿಕೆ…!

ಈ ಕಾರ್ಯಕ್ರಮದಲ್ಲಿ ಭಾಗಿಯಾಗಲು ತಮಿಳಿನ ಸೂಪರ್ ಸ್ಟಾರ್ ರಜನಿಕಾಂತ್ ( RAJANIKANTH )ಬೆಂಗಳೂರಿಗೆ ಬಂದಿಳಿದಿದ್ದಾರೆ. ಹೆಚ್.ಎ.ಎಲ್ ಏರ್ ಪೋರ್ಟ್ ಗೆ ಬಂದಿಳಿದ ರಜನಿಯನ್ನು ವೈದ್ಯಕೀಯ ಶಿಕ್ಷಣ ಸಚಿವ ಕೆ. ಸುಧಾಕರ್ ಬರಮಾಡಿಕೊಂಡರು.

ಕೆ.ಸುಧಾಕರ್ ಮತ್ತು ಸರಕಾರದ ಪ್ರತಿನಿಧಿಗಳು ವಿಮಾನ ನಿಲ್ದಾಣಕ್ಕೆ ಆಗಮಿಸಿ, ಹೂಗುಚ್ಛ ನೀಡುವ ಮೂಲಕ ತಲೈವಾರನ್ನು ಸ್ವಾಗತ ಕೋರಿದರು. ಸಚಿವ ಮುನಿರತ್ನ ಕೂಡ ಈ ಸಂದರ್ಭದಲ್ಲಿ ಉಪಸ್ಥಿತರಿದ್ದು, ರಜನಿಕಾಂತ್ ಅವರನ್ನು ಬರಮಾಡಿಕೊಂಡರು.

ಇದನ್ನೂ ಓದಿ : –  BREAKING NEWS – ಲೈಂಗಿಕ ದೌರ್ಜನ್ಯಕ್ಕೊಳಗಾದವರಿಗೆ ಕನ್ಯತ್ವ ಪರೀಕ್ಷಿಸುವ Two Finger Test ನಿಷೇಧಿಸಿದ ಸುಪ್ರೀಂ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!