‘ಕುಣಿಯಲಾರದವನಿಗೆ ನೆಲ ಡೊಂಕು ಎಂಬಂತೆ ಜನರ ವಿಶ್ವಾಸ ಕಳೆದುಕೊಂಡು ಹತಾಶಗೊಂಡಿರುವ ಕಾಂಗ್ರೆಸ್ ( congress ) ಪಕ್ಷವು ಮತಯಂತ್ರಗಳ ಮೇಲೆ ಸಂಶಯ ಮೂಡಿಸುವುದು, ಚುನಾವಣಾ ಆಯೋಗದ ಬಗ್ಗೆ ಅಪಸ್ವರ ಎತ್ತುವುದು ಹೀಗೆ ಒಂದಲ್ಲಾ ಒಂದು ಕ್ಯಾತೆ ತೆಗೆಯುತ್ತಲೇ ಬಂದಿದೆ.
ಮತದಾರರ ಪಟ್ಟಿ ಪರಿಷ್ಕರಣೆ ಅಕ್ರಮ ಆರೋಪ ಈ ಸುಳ್ಳುಗಳ ಸರಮಾಲೆಗೆ ಹೊಸ ಸೇರ್ಪಡೆಯಷ್ಟೆ’ ಎಂದು ಸುಧಾಕರ್ ಹೇಳಿದ್ದಾರೆ.
‘ಬಿಜೆಪಿ ಸರ್ಕಾರದ ವಿರುದ್ಧ ರಚನಾತ್ಮಕ ಹೋರಾಟ ಮಾಡಲು ಯಾವುದೇ ವಿಷಯಗಳಲ್ಲಿದೆ ಹತಾಶಗೊಂಡಿರುವ ಕಾಂಗ್ರೆಸ್ ನಾಯಕರು ದಿನಕ್ಕೊಂದು ಕಟ್ಟುಕಥೆ ಸೃಷ್ಟಿಸುವ ಹುನ್ನಾರ ನಡೆಸುತ್ತಿದ್ದಾರೆ. ಬಿಜೆಪಿ ಪಕ್ಷ ಹಾಗೂ ಸರ್ಕಾರದ ವರ್ಚಸ್ಸಿಗೆ ಮಸಿ ಬಳಿಯುವ ಭರಾಟೆಯಲ್ಲಿ ತಮಗೆ ತಾವೇ ಮಸಿ ಬಳಿದುಕೊಳ್ಳುತ್ತಿದ್ದಾರೆ’ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ :– ಮಂಗಳೂರು ಆಟೋರಿಕ್ಷಾ ಸ್ಫೋಟ ಪ್ರಕರಣ – ತನಿಖೆಗೆ ಸಿದ್ದರಾಮಯ್ಯ ಆಗ್ರಹ
‘ದಿಟ್ಟ ನಾಯಕತ್ವ, ಅಭಿವೃದ್ಧಿ, ಸುಶಾಸನ, ಭ್ರಷ್ಟಾಚಾರ-ಮುಕ್ತ ಆಡಳಿತ ನೀಡುವ ಮೂಲಕ ದೇಶಾದ್ಯಂತ ಜನಮನ್ನಣೆ ಪಡೆಯುತ್ತಿರುವ ನಮ್ಮ ಪಕ್ಷಕ್ಕೆ ಚುನಾವಣೆ ಗೆಲ್ಲಲು ಯಾವುದೇ ವಾಮಮಾರ್ಗದ ಅವಶ್ಯಕತೆಯೂ ಇಲ್ಲ. ನಮಗೆ ಅದರ ಬಗ್ಗೆ ನಂಬಿಕೆಯೂ ಇಲ್ಲ’ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
‘ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ 2017ರಲ್ಲಿ ಅಂದಿನ ಕಾಂಗ್ರೆಸ್ ಸರಕಾರವೇ ಅನುಮತಿ ಕೊಟ್ಟ ಒಂದು ಸಂಸ್ಥೆಯ ಮೇಲೆ ಈಗ ಇಲ್ಲಸಲ್ಲದ ಆರೋಪ ಮಾಡಿ ಬಿಜೆಪಿ ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿರುವುದು ಕೋತಿ ಮೊಸರು ತಿಂದು ಮೇಕೆ ಬಾಯಿಗೆ ಸವರಿದ ಕಥೆಯನ್ನು ನೆನಪಿಸುತ್ತದೆ’ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ :– ಎರಡೂ ರಾಷ್ಟ್ರೀಯ ಪಕ್ಷಗಳು ಅಧಿಕಾರ ದುರುಪಯೋಗ ಮಾಡಿಕೊಂಡಿವೆ– ಹೆಚ್.ಡಿ ಕುಮಾರಸ್ವಾಮಿ