ಕಾಂಗ್ರೆಸ್ ದಿವಾಳಿಯಾಗಿದೆ ಎಂಬ ಸಿಎಂ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಸಂಸದ ಡಿ.ಕೆ ಸುರೇಶ್ ( D.K SURESH ) ತಿರುಗೇಟು ನೀಡಿದ್ದಾರೆ.
ರಾಜ್ಯದ ಎಲ್ಲಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳು ಬಹಳಷ್ಟು ಜನ ಇದ್ದಾರೆ. ಇದರ ಅರ್ಥ ಕಾಂಗ್ರೆಸ್ ಜನ ಬೆಂಬಲ ಇದೆ ಅಂತ ಆಯ್ತು. ಸಿಎಂ ಬಸವರಾಜ್ ಬೊಮ್ಮಾಯಿ ( BASAVARAJ BOMMAI ) ಕ್ಷೇತ್ರದಲ್ಲಿಯೇ 51 ಜನ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿದ್ದಾರೆ . ಸಿಎಂ ಬೊಮ್ಮಾಯಿ ಆಡಳಿತ ವಿರುದ್ಧ ಜನರು ದಂಗೆ ಎಳುತ್ತಿದ್ದಾರೆ. ಚುನಾವಣೆಗೆ ನಾವು ಎಲ್ಲಾ ಹಂತದಲ್ಲಿ ತಯಾರಿ ಮಾಡಿಕೊಳ್ಳುತ್ತಿದ್ದೇವೆ ಎಂದು ಹೇಳಿದ್ರು. ಇದನ್ನೂ ಓದಿ : – ಮಹಾರಾಷ್ಟ್ರದಲ್ಲಿ ಕರ್ನಾಟಕ ಬಸ್ ಗೆ ಕಪ್ಪು ಮಸಿ ಬಳಿದ ಮರಾಠಿ ಭಾಷಿಕ ಪುಂಡರು..!
ವರ್ತೂರ ಬಳಿಯ ಖಾಸಗಿ ಹೋಟೆಲ್ ನಲ್ಲಿ ಸಭೆ ವಿಚಾರವಾಗಿ ಮಾತನಾಡಿದ ಅವರು, ಟಿಕೆಟ್ ಆಕಾಂಕ್ಷಿಗಳು ,ಶಾಸಕರು, ಪಕ್ಷದನಾಯಕರು ಸಭೆಗೆ ಬರ್ತಾರೆ. ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಸರ್ಕಾರ ಅಕ್ರಮಮಾಡಿದೆ. ಇಂದಿನ ಸಭೆಯಲ್ಲಿ ಈ ವೋಟರ್ ಐಡಿ ( VOTER ID ) ಪ್ರಕರಣ ಕುರಿತು ಚರ್ಚೆ ಆಗುತ್ತದೆ. ಈ ವೋಟರ್ ಐಡಿ ಹಗರಣದ ಕುರಿತು ಮುಂದಿನ ದಿನಗಳಲ್ಲಿ ಯಾವ ರೀತಿ ಹೋರಾಟ ಮಾಡಬೇಕು ಅನ್ನೊದರ ಬಗ್ಗೆ ಸಭೆಯಲ್ಲಿ ನಿರ್ಧಾರವಾಗಲಿದೆ ಎಂದು ಹೇಳಿದ್ರು.
ಇದನ್ನೂ ಓದಿ : – ನನಗೆ ಏನು ಗೊತ್ತು ನಿಮ್ಮತ್ರನೇ ಉತ್ತರ ಇದೆ ನಿಮ್ಮತ್ರನೇ ಪ್ರಶ್ನೆ ಇದೆ – ಡಿ.ಕೆ ಶಿವಕುಮಾರ್