ತಾಯಿ-ಮಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಬೆಂಗಳೂರಿನ ರಾಜಗೋಪಾಲನಗರ ( RAJAGOPALA NAGARA ) ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತಾಯಿ ಭಾಗ್ಯಮ್ಮ(57), ಪುತ್ರ ಶ್ರೀನಿವಾಸ್(33) ಮೃತ ದುರ್ದೈವಿಗಳು. ವಯಸ್ಸಾದ ಹಿನ್ನೆಲೆ ಶ್ರೀನಿವಾಸ್ ಕೆಲವು ದಿನಗಳ ಹಿಂದೆ ತಾಯಿಯನ್ನ ಊರಿಂದ ಬೆಂಗಳೂರಿಗೆ ಕರೆದುಕೊಂಡು ಬಂದಿದ್ದರು.
ಆದರೆ ಇದೇ ವಿಚಾರವಾಗಿ ಶ್ರೀನಿವಾಸ್ ಪತ್ನಿ ಸಂಧ್ಯಾ ತನ್ನ ಗಂಡನೊಂದಿಗೆ ನಿತ್ಯ ಜಗಳ ಮಾಡುತ್ತಿದ್ದಳು. ಇಂದು ಬೆಳಗ್ಗೆಯೂ ಇದೇ ವಿಚಾರಕ್ಕೆ ದಂಪತಿ ಜಗಳವಾಡಿದ್ದಾರೆ. ಬಳಿಕ ಮನನೊಂದು ಶ್ರೀನಿವಾಸ್ ತನ್ನ ತಾಯಿಯೊಂದಿಗೆ ತಾವು ವಾಸವಾಗಿದ್ದ ಮನೆಯ ಕೋಣೆಯಲ್ಲಿ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ರಾಜಗೋಪಾಲನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.
ಇದನ್ನೂ ಓದಿ : – ಚುನಾವಣೆ ಟಿಕೆಟ್ ಸಿಗದಿದ್ದಕ್ಕೆ ವಿದ್ಯುತ್ ಟವರ್ ಏರಿದ AAP ಮುಖಂಡ