ಧಾರ್ಮಿಕ ಕ್ಷೇತ್ರವಾದ ಮಲೆ ಮಹದೇಶ್ವರ ಬೆಟ್ಟ ( male mahadeshwara betta ) ದಲ್ಲಿ ದೀಪಾವಳಿ ಹಬ್ಬದ ಹಿನ್ನೆಲೆ ಇಂದು ಮಹಾ ರಥೋತ್ಸವಕ್ಕೆ ಚಾಲನೆ ನೀಡಲಾಯಿತು.
ಇಂದು ಬೆಳಗ್ಗೆ 9.15 ರಿಂದ 9.45 ರ ವರೆಗೆ ಸಾಲೂರು ಮಠದ ಪೀಠಾಧಿಪತಿ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಸಮ್ಮುಖದಲ್ಲಿ ಮಹಾ ರಥೋತ್ಸವ ಜರುಗಿದೆ. 2 ವರ್ಷಗಳಿಂದ ಕೋವಿಡ್ ಕಾರಣಕ್ಕೆ ದೀಪಾವಳಿ ಜಾತ್ರೆ ಸೇರಿದಂತೆ ಎಲ್ಲ ಜಾತ್ರೆ ಹಾಗೂ ಉತ್ಸವಗಳನ್ನು ಸರಳವಾಗಿ ಆಚರಿಸಲಾಗಿತ್ತು. ಇದನ್ನೂ ಓದಿ : – ‘ಹೆಡ್ ಬುಷ್’ ಸಿನಿಮಾದಲ್ಲಿ ವೀರಗಾಸೆಗೆ ಅವಮಾನ – ಡಾಲಿ ಧನಂಜಯ್ ಸ್ಪಷ್ಟನೆ
ಹಾಗಾಗಿ ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ. ಮೆರವಣಿಗೆಯಲ್ಲಿ ಹುಲಿ ವಾಹನ, ಬಸವ ವಾಹನ ಹಾಗೂ ರುದ್ರಾಕ್ಷಿ ವಾಹನಗಳು, ಜಾನಪದ ಕಲಾತಂಡಗಳು ಭಾಗಿಯಾಗಿದ್ದವು.
ಇದನ್ನೂ ಓದಿ : – ನ. 1ರಿಂದ ಕೋಲಾರಲ್ಲಿ ಪಂಚರತ್ನ ರಥಯಾತ್ರೆ ಆರಂಭ – 35 ದಿನಗಳ ರಥಯಾತ್ರೆಯ ಪಟ್ಟಿ ಬಿಡುಗಡೆ