2,500 ಅಡಿ ಉದ್ದದ ತಿರಂಗಾ ವಾಕಥಾನ್ ಗೆ ಸುಧಾಕರ್ ಚಾಲನೆ

75ನೇ ಸ್ವಾತಂತ್ರ್ಯ ದಿನಾಚರಣೆ ಅಮೃತ ಮಹೋತ್ಸವ ಅಂಗವಾಗಿ ದೇಶಾದ್ಯಂತ ಹರ್ ಘರ್ ತಿರಂಗಾ ಅಭಿಯಾನಕ್ಕೆ ಕರೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಜನರಲ್ಲಿ ಜಾಗೃತಿ ಹಾಗೂ ಪ್ರೇರೇಪಣೆ ಮೂಡಿಸುವ ಸಲುವಾಗಿ ಇಂದು ಚಿಕ್ಕಬಳ್ಳಾಪುರ ( chikkaballpura ) ನಗರದಲ್ಲಿ 2,500 ಅಡಿ ಉದ್ದದ ತಿರಂಗಾ ಯಾತ್ರೆ ನಡೆಸಲಾಯಿತು.

ಚಿಕ್ಕಬಳ್ಳಾಪುರ ಜಿಲ್ಲಾಡಳಿತ ವತಿಯಿಂದ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ನೇತೃತ್ವದಲ್ಲಿ 2,500 ಅಡಿ ಉದ್ದದ ತ್ರಿವರ್ಣ ಧ್ವಜದ ವಾಕಥಾನ್ ನಡೆಸಲಾಯಿತು. ನಗರದ ಎಂಜಿ ರಸ್ತೆಯ ಜೈ ಭೀಮ್ ವಿದ್ಯಾರ್ಥಿನಿಲಯದಿಂದ ಬಿಬಿರಸ್ತೆಯ ಮೂಲಕ ಸಾಗಿ ಒಕ್ಕಲಿಗರ ಕಲ್ಯಾಣಮಂಟಪದ ಬಳಿ ವಾಕಥಾನ್ ಅಂತ್ಯವಾಯಿತು. ಈ ವಾಕಥಾನ್ ನಲ್ಲಿ ಸಾವಿರಾರು ಮಂದಿ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಇದನ್ನೂ ಓದಿ : – ಗಾಯಕ ಸುಬ್ಬಣ್ಣ ಅಗಲಿಕೆಗೆ ಸಂತಾಪ ಸೂಚಿಸಿದ ಆರ್.ಅಶೋಕ್


ಆಗಸ್ಟ್ 13 ರಿಂದ 15 ರವರೆಗೆ ದೇಶದಲ್ಲಿ ಹರ್ ಘರ್ ತಿರಂಗಾ ಅಭಿಯಾನ ನಡೆಯಲಿದ್ದು, ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಇಂದು ಆಯೋಜಿಸಿದ್ದ ವಾಕಥಾನ್ ಇಡೀ ನಗರದಲ್ಲಿ ಸಂಚಲನವನ್ನೇ ಮೂಡಿಸಿತ್ತು. ಸುಮಾರು 2,500 ಅಡಿಗಳ ಉದ್ದದ ರಾಷ್ಟ್ರಧ್ವಜದೊಂದಿಗೆ ಹೆಜ್ಜೆ ಹಾಕಿದ ಸಾವಿರಾರು ಶಾಲಾ-ಕಾಲೇಜು ವಿದ್ಯಾರ್ಥಿಗಳೊಂದಿಗೆ ಆರೋಗ್ಯ ಸಚಿವರು ಹೆಜ್ಜೆ ಹಾಕಿ ಹುರುಪು ತುಂಬಿದರು. ಹೆಜ್ಜೆ ಹೆಜ್ಜೆಗೂ ಭಾರತ್ ಮಾತಾಕಿ ಜೈ ಉದ್ಘೋಷ ಅನುಕರಣಿಸುತ್ತಿದ್ದ ಮೆರವಣಿಗೆಯಲ್ಲಿ ಎಲ್ಲರ ಕೈಯಲ್ಲೂ ತ್ರಿವರ್ಣ ಧ್ವಜಗಳು ರಾರಾಜಿಸುತ್ತಿದ್ದವು. ಬ್ಯಾಂಡ್ ಸೆಟ್ ಗಳು, ಡಿಜೆ ಶಬ್ದದ ಅಬ್ಬರದ ನಡುವೆ ರಾಷ್ಟ್ರಪ್ರೇಮ ಉಕ್ಕೇರಿಸುವ ಘೋಷಣೆಗಳು ಮೊಳಗಿದವು.

ಇದನ್ನೂ ಓದಿ : –  ಅರ್ಜುನನ ತೂಕ 5,725 ಕೆ.ಜಿ – ಈ ಬಾರಿಯೂ ನಾನೇ ಬಲಶಾಲಿ ಎಂದ ಗಜರಾಜ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!