ಚಿಕ್ಕಮಗಳೂರ (Chikkamagaluru) ಲ್ಲಿ ಕಾಡಾನೆ ದಾಳಿಗೆ ಕಾರ್ಮಿಕ ಅರ್ಜುನ್ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ಮುಂದೆ ಮೃತದೇಹವಿಟ್ಟು ಪ್ರತಿಭಟನಾಕಾರರು ಪ್ರತಿಭಟನೆ ನಡೆಸಿದ್ದಾರೆ.
ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ. ಕಾಡಾನೆಯನ್ನ ಸೆರೆ ಹಿಡಿಯುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ. ಸ್ಥಳೀಯರು ಅರಣ್ಯ ಇಲಾಖೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ವಿದ್ಯಾರ್ಥಿನಿ ಕಣ್ಣೀರು
ಗದಗ (Gadag) ದಲ್ಲಿ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಮನೆಗಳಿಗೆ ನೀರು ನುಗ್ಗಿದೆ. ಪುಸ್ತಕಗಳು ನೀರು ಪಾಲಾಗಿದೆಯೆಂದು ವಿದ್ಯಾರ್ಥಿನಿಯಾದ ಸುಮಯ್ಯಾ ಅಂಡೇವಾಲೆ ಕಣ್ಣೀರು ಹಾಕಿದ್ದಾಳೆ .ಮೊಮ್ಮಗಳ ಪುಸ್ತಕ ಒದ್ದೆಯಾಗಿದ್ದಕ್ಕೆ ಅಜ್ಜಿಯಾದ ಫಾತಿಮಾ ಅಂಡೇವಾಲೆ ಬೇಸರ ವ್ಯಕ್ತ ಪಡಿಸಿದ್ದಾರೆ. ಇದನ್ನೂ ಓದಿ : – ಸಮವಸ್ತ್ರದಲ್ಲಿ ಮಲವಿಸರ್ಜನೆ ಮಾಡಿದ್ದಕ್ಕೆ ಬಿಸಿ ನೀರು ಎರಚಿ ವಿಕೃತಿ ಮೆರೆದ ಶಿಕ್ಷಕ
ಇಬ್ಬರು ರೈತರ ರಕ್ಷಣೆ
ಕೊಪ್ಪಳ (Koppal) ದ ಹಿರೇಹಳ್ಳದ ನಡುವೆ ಸಿಲುಕಿದ ಐವರು ರೈತರನ್ನು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ್ದಾರೆ. ಬೋಟ್ ಮೂಲಕ ಐವರು ರೈತರನ್ನು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಐವರು ರೈತರನ್ನು ಸುರಕ್ಷಿತವಾದ ಸ್ಥಳಕ್ಕೆ ಕರೆತಂದಿದ್ದಾರೆ.
ಇದನ್ನೂ ಓದಿ : – ಬ್ರಿಟನ್ ರಾಣಿ ನಿಧನದ ಹಿನ್ನೆಲೆ – ಸೆ.11ರಂದು ಭಾರತದಲ್ಲಿ ಒಂದು ದಿನದ ಶೋಕಾಚರಣೆ