ಚಿಕ್ಕಮಗಳೂರು (Chikkamagaluru) ಕಾಂಗ್ರೆಸ್ ನಾಯಕಿ ಮಾಜಿ ಎಂಎಲ್ ಸಿ ಗಾಯತ್ರಿ ಶಾಂತೇಗೌಡ (Gayathri shantegowda) ಮನೆಯಲ್ಲಿ IT ಅಧಿಕಾರಿಗಳು ದಾಳಿ ನಡೆಸಿದ ಹಿನ್ನೆಲೆಯಲ್ಲಿ ಗಾಯಿತ್ರಿ ಶಾಂತೇಗೌಡ ಮನೆ ಮುಂದೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಶಾಸಕ ಸಿ.ಟಿ.ರವಿ (CT Ravi) ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಲೂಟಿ ರವಿ ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಐಟಿ ದುರಪಯೋಗ ಮಾಡಿಕೊಳ್ಳುತ್ತಿರುವ ಬಿಜೆಪಿ ಸರ್ಕಾರಕ್ಕೆ ಧಿಕ್ಕಾರ ಕೂಗಿದ್ದಾರೆ. ಮೊದಲು ಸಿ.ಟಿ.ರವಿ ಮನೆ ರೈಡ್ ಮಾಡಿ ಎಂದು ಆಕ್ರೋಶ ಹೊರಹಾಕಿದ್ದಾರೆ . ಗಾಯಿತ್ರಿ ಶಾಂತೇಗೌಡ ಮನೆ ಮುಂದೆ ಕಾಂಗ್ರೆಸ್ ಕಾರ್ಯಕರ್ತರು ಜಮಾಯಿಸಿದ್ದಾರೆ. ಗಾಯಿತ್ರಿ ಶಾಂತೇಗೌಡ ಮನೆ ಮುಂದೆ ಬಿಗಿ ಪೊಲೀಸ್ ಬಂದೋಬಸ್ತ್ ಆಯೋಜನೆ ಮಾಡಲಾಗಿದೆ. ಸಿಟಿ ರವಿ ಪೋಸ್ಟರ್ ಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ್ದಾರೆ. ಕಾಲಿನಿಂದ ಒದ್ದು ಬೆಂಕಿ ಹಚ್ಚಿ ಕೈ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿ.ಟಿ ರವಿ, ಗುತ್ತಿಗೆದಾರ ಸುದರ್ಶನ್ ಮನೆ ಮೇಲೆ ದಾಳಿ ಮಾಡಿ ಎಂದು ಆಕ್ರೋಶ ಹೊರಹಾಕಿದ್ದಾರೆ. ಚಿಕ್ಕಮಗಳೂರು ನಗರದ ಅಜಾದ್ ಪಾರ್ಕ್ ನಲ್ಲಿ ಪ್ರತಿಭಟನೆ ನಡೆದಿದೆ.
ಇದನ್ನೂ ಓದಿ : – ತುಷಾರ್ ಗಿರಿನಾಥ್ ಸೀನಿಯರ್ ಐಎಎಸ್ ಅಧಿಕಾರಿ ಆಗಿ ಗೌರವ ಕಳೆದುಕೊಂಡಿದ್ದಾರೆ – ಡಿಕೆ ಶಿವಕುಮಾರ್