ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ನವೆಂಬರ್ 6ರವರೆಗೆ ಭಾರೀ ಮಳೆಯಾಗಲಿದೆ. ರಾಜ್ಯದ ಉತ್ತರ ಒಳನಾಡು, ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದಿನಿಂದ 3 ದಿನ ಮಳೆ ಮುಂದುವರೆಯಲಿದೆ. ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿ ರಾಜ್ಯಾದ್ಯಂತ ಇನ್ನೂ 3 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ. ತುಮಕೂರು, ರಾಮನಗರ ( RAMANAGARA ) ಚಿಕ್ಕಬಳ್ಳಾಪುರ, ಚಾಮರಾಜನಗರ, ಕೊಡಗು, ಚಿಕ್ಕಮಗಳೂರು ( CHIKKAMAGALURU ) ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ.
ಕರಾವಳಿ ಜಿಲ್ಲೆಗಳಲ್ಲಿ 2 ದಿನಗಳಿಂದ ಮಳೆ ಶುರುವಾಗಿದೆ. ಮಲೆನಾಡು, ಉತ್ತರ ಒಳನಾಡು, ಕರಾವಳಿ, ಬೆಂಗಳೂರು ಭಾಗದಲ್ಲಿ ಇಂದಿನಿಂದ ನ. 6ರವರೆಗೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ 3 ದಿನ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಒಳನಾಡಿನಲ್ಲಿ ಇಂದಿನಿಂದ 4 ದಿನ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಭಾಗದಲ್ಲಿ ಇಂದಿನಿಂದ 3 ದಿನ ಮಳೆಯಾಗಲಿದೆ. ಬೆಂಗಳೂರು ನಗರ, ಚಾಮರಾಜನಗರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಮತ್ತು ಸುತ್ತಮುತ್ತ ಮೋಡ ಕವಿದ ವಾತಾವರಣವಿದ್ದು, ಕೆಲವೆಡೆ ಬೆಳಗ್ಗೆಯಿಂದಲೇ ಮಳೆಯಾಗುತ್ತಿದೆ. ಇದನ್ನೂ ಓದಿ : – ಭಾರತದ ಕೆಲ ಕಡೆಗಳಲ್ಲಿ ಟ್ವಿಟರ್ ಡೌನ್ – ಲಾಗಿನ್ ಮಾಡಲು ಜನರ ಪರದಾಟ
ಬೆಂಗಳೂರಿನಲ್ಲಿ ಮೂರ್ನಾಲ್ಕು ದಿನಗಳಿಂದ ಮಳೆ ಹೆಚ್ಚಾಗಿರುವುದರಿಂದ ಬೆಂಗಳೂರಿನಲ್ಲಿ ತಗ್ಗುಪ್ರದೇಶ, ರಾಜಕಾಲುವೆಯ ಅಕ್ಕಪಕ್ಕದಲ್ಲಿ ವಾಸ ಮಾಡುವವರು ಎಚ್ಚರದಿಂದಿರಲು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಇಂದಿನಿಂದ ನವೆಂಬರ್ 6ರವರೆಗೆ ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡು, ಬೆಂಗಳೂರಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು, ಕೊಡಗು, ಶಿವಮೊಗ್ಗ, ಕೋಲಾರ, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ( YELLOW ALERT ) ಘೋಷಿಸಲಾಗಿದೆ. ಇಂದು ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಧಾರಾಕಾರ ಮಳೆ ಸುರಿಯುವ ಸಾಧ್ಯತೆ ಇದೆ. ಈಶಾನ್ಯ ಮಾನ್ಸೂನ್ ದಕ್ಷಿಣದ ರಾಜ್ಯಗಳಾದ ತಮಿಳುನಾಡು, ಕೇರಳ ಮತ್ತು ಆಂಧ್ರಪ್ರದೇಶಕ್ಕೆ ಆಗಮಿಸುತ್ತಿದ್ದಂತೆ ಭಾರತೀಯ ಹವಾಮಾನ ಇಲಾಖೆ ಮುಂದಿನ 3 ದಿನಗಳವರೆಗೆ ಮಳೆಯ ಎಚ್ಚರಿಕೆಯನ್ನು ನೀಡಿದೆ.
ಇದನ್ನೂ ಓದಿ : – GUJARAT ELECTION – ಡಿಸೆಂಬರ್ 1ರಂದು ಮೊದಲ 5ರಂದು 2ನೇ ಹಂತದ ಮತದಾನ- ಡಿಸೆಂಬರ್ 8ರಂದು ಫಲಿತಾಂಶ ಪ್ರಕಟ