ಕುಕ್ಕೆ ಸುಬ್ರಹ್ಮಣ್ಯ ದೇಗುಲದಲ್ಲಿ ಚಂಪಾಷಷ್ಠಿಯ ದಿನದಂದು ಮಾತ್ರ ಎಡೆಸ್ನಾನಕ್ಕೆ ಅವಕಾಶ

ಕುಕ್ಕೆ ಶ್ರೀ ಸುಬ್ರಹ್ಮಣ್ಯದಲ್ಲಿ ಚಂಪಾ ಷಷ್ಠಿ ( CHAMPA SASTI ) ಯ ಎಡೆಸ್ನಾನ ಸೇವೆಗೆ ಈ ಬಾರಿ ಅವಕಾಶ ನೀಡಲಾಗಿದೆ. ಕೊರೊನಾ ( CORONA ) ಸಮಯದಲ್ಲಿ ಈ ಆಚರಣೆಗೆ ನಿರ್ಬಂಧಿಸಲಾಗಿತ್ತು. ನವೆಂಬರ್ 21ರಿಂದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಚಂಪಾಷಷ್ಠಿ ಜಾತ್ರಾ ಮಹೋತ್ಸವ ನಡೆಯಲಿದೆ. ಈಗಾಗಲೇ ಆಡಳಿತ ಮಂಡಳಿ ಚಂಪಾಷಷ್ಠಿ ಜಾತ್ರಾ ಮಹೋತ್ಸವ ನಡೆಸುವ ಬಗ್ಗೆ ಮಹತ್ವ ನಿರ್ಧಾರ ತೆಗೆದುಕೊಂಡಿದೆ.

ಲಕ್ಷ ದೀಪೋತ್ಸವ ದಿನದಂದು ರಾತ್ರಿ ರಥೋತ್ಸವದ ಇಲ್ಲಿನ ಬೀದಿಯಲ್ಲಿ ಉರುಳು ಸೇವೆ ಮಾಡುವವರಿಗೆ ಸಂಜೆ 5ರಿಂದ ಬೆಳಗ್ಗೆ 6 ಗಂಟೆವರೆಗೆ ಅವಕಾಶ ನೀಡಲಾಗುವುದು ಎಂದು ಈ ಸಭೆಯಲ್ಲಿ ತಿಳಿಸಿದ್ದಾರೆ. ಸಭೆಯಲ್ಲಿ ತಿಳಿಸಿರುವಂತೆ ಈ ಬಾರಿ 3 ದಿನ ಎಡೆಸ್ನಾನಕ್ಕೆ ಅವಕಾಶ ನೀಡಲಾಗಿದೆ. ಚೌತಿ, ಪಂಚಮಿ ಮತ್ತು ಷಷ್ಠಿಯಂದು ಎಡೆಸ್ನಾನ ಮಾಡಬಹುದು. ಅಂದರೆ, ನ.27, 28 ಮತ್ತು 29ರಂದು ಇದಕ್ಕೆ ಅವಕಾಶ ಸಿಗಲಿದೆ. ಮಧ್ಯಾಹ್ನ ಮಹಾಪೂಜೆಯ ಬಳಿಕ ಭಕ್ತರು ಸ್ವ-ಇಚ್ಛೆಯಲ್ಲಿ ಎಡೆಸ್ನಾನದಲ್ಲಿ ಭಾಗವಹಿಸಬಹುದು. ಅಂಗಳದ ಸುತ್ತಲೂ ಎಲೆಗಳನ್ನ ಹಾಕಿ ಅದ್ರಲ್ಲಿ ನೈವೇದ್ಯ ಬಡಿಸಲಾಗುತ್ತೆ. ಅದನ್ನ ಹಸುಗಳು ತಿಂದ ಬಳಿಕ ಭಕ್ತರು ಎಲೆಯ ಮೇಲೆ ಉರುಳೋದು ಎಡೆಸ್ನಾನ. ಧಾರ್ಮಿಕ ದತ್ತಿ ಇಲಾಖೆಯ ಇಬ್ಬರು ಆಗಮಶಾಸ್ತ್ರ ಪಂಡಿತರು ಉಪಸ್ಥಿತಿಯಲ್ಲಿ ಈ ಎಡೆಸ್ನಾನ ನಡೆಯಲಿದೆ ಮತ್ತು ಜಿಲ್ಲಾಧಿಕಾರಿಗಳ ಆದೇಶದಂತೆ ಅಂದರೆ ಅವರ ನೇತೃತ್ವದಲ್ಲೇ ಈ ಕಾರ್ಯ ನಡೆಯುತ್ತದೆ. ಇದನ್ನೂ ಓದಿ : – BJP V/S BJP ಕಿಚ್ಚು ಎಷ್ಟಿದೆ ಎನ್ನಲು ಮೈಸೂರಿನಲ್ಲಿ ನಡೆಯುತ್ತಿರುವ ಪ್ರತಾಪ್ ಸಿಂಹ vs ರಾಮದಾಸ್ ಕಾಳಗವೇ ಸಾಕ್ಷಿ – ಬಿಜೆಪಿ ಕಾಳೆಲೆದ ಕಾಂಗ್ರೆಸ್

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಚಂಪಾಷಷ್ಠಿ ಜಾತ್ರಾ ಮಹೋತ್ಸವದಲ್ಲಿ ಕುಣಿತ ಭಜನೆ ನಡೆಸಲು ಅವಕಾಶ ನೀಡಲಾಗಿದೆ. ಈ ಬಗ್ಗೆ ಅನೇಕ ತಂಡಗಳಿಗೆ ಆಹ್ವಾನ ನೀಡಲಾಗಿದೆ. ಈಗಾಗಲೇ ಇಲ್ಲಿನ ಆಡಳಿತ ಮಂಡಳಿ ತಿಳಿಸಿರುವಂತೆ 1 ಸಾವಿರಕ್ಕೂ ಹೆಚ್ಚು ತಂಡಗಳು ಭಾಗವಹಿಸುವ ನಿರೀಕ್ಷೆ ಇದೆ ಎಂದು ಹೇಳಲಾಗಿದೆ. ಪ್ರತಿಕಾ ಪ್ರಕಟನೆಯಲ್ಲಿ ತಿಳಿಸಿರುವಂತೆ ಕುಣಿತ ಭಜನೆಗೆ ಹೆಸರನ್ನು ನೋಂದಾಯಿಸಿಕೊಳ್ಳಬಹು ಎಂದು ಹೇಳಿದೆ.

ಇದನ್ನೂ ಓದಿ : – ಚಿತ್ರನಟಿ ಮಾಡೆಲ್ ಮೇಲೆ ಲೈಂಗಿಕ ದೌರ್ಜನ್ಯ – ಟ್ಯಾಕ್ಸಿ ಚಾಲಕನ ಜೊತೆ ಕಂಪನಿಯ ಮೇಲೂ ದೂರು ದಾಖಲು

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!