ಬಿಜೆಪಿ ( BJP ) ಕಾರ್ಯಕರ್ತ ಪ್ರವೀಣ್ ನೆಟ್ಟಾರು ( PRAVEEN NEETARU ) ತ್ಯೆ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ದಳ (ಎನ್ಐಎ) ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಹಲವು ಸ್ಥಳಗಳಲ್ಲಿ ಶೋಧ ನಡೆಸಿದ್ದು, ಮೂವರನ್ನು ಬಂಧಿಸಿದೆ.
ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಚು ರೂಪಿಸಿದ್ದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದ ಕೆ ಮಹಮ್ಮದ್ ಇಕ್ಬಾಲ್ ಮತ್ತು ಈತನ ಸಹೋದರ ಕೆ ಇಸ್ಮಾಯಿಲ್ ಶಾಫಿ ಮತ್ತು ಸುಳ್ಯ ತಾಲೂಕಿನ ಕಸಬಾ ಗ್ರಾಮದ ಇಬ್ರಾಹಿಂ ಶಾ ಬಂಧಿತ ಆರೋಪಿಗಳು.
ದಕ್ಷಿಣ ಕನ್ನಡ, ಹುಬ್ಬಳ್ಳಿ ಮತ್ತು ಮೈಸೂರು ಜಿಲ್ಲೆಗಳ 5 ಸ್ಥಳಗಳಲ್ಲಿ ಎನ್ಐಎ ಶೋಧ ನಡೆಸಿದೆ.
ಬೆಳ್ಳಾರೆ ನಿವಾಸಿ ಹಾಗೂ ಬಿಜೆಪಿ ಯುವ ಮೋರ್ಚಾದ ಜಿಲ್ಲಾ ಕಾರ್ಯದರ್ಶಿ ಪ್ರವೀಣ್ ನೆಟ್ಟಾರು ಅವರನ್ನು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಕಾರ್ಯಕರ್ತರು ಜೂನ್ 26 ರಂದು ಹರಿತವಾದ ಆಯುಧಗಳಿಂದ ಹತ್ಯೆಗೈದಿದ್ದರು.
ಇದನ್ನೂ ಓದಿ : – ಬಿಜೆಪಿ ಏನೇ ಮಾಡಿದ್ರು ಕಾಂಗ್ರೆಸ್ ನವರು ವಿರೋಧ ಮಾಡುತ್ತಾರೆ – ಪ್ರಹ್ಲಾದ್ ಜೋಶಿ
ಶೋಧದ ವೇಳೆ ಆರೋಪಿಗಳು ಮತ್ತು ಶಂಕಿತರ ಮನೆಗಳಿಂದ ಡಿಜಿಟಲ್ ಸಾಧನಗಳು ಮತ್ತು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಪ್ರಕರಣದಲ್ಲಿ ಇದುವರೆಗೆ 10 ಆರೋಪಿಗಳನ್ನು ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ನಾಲ್ವರು ಆರೋಪಿಗಳ ವಿರುದ್ಧ NIA ಬಹುಮಾನ ಘೋಷಿಸಿದೆ.
ಇದನ್ನೂ ಓದಿ : – ರೇಣುಕಾಚಾರ್ಯಗೆ ಊಟ ಮಾಡಿಸಿದ ಕ್ಷೇತ್ರದ ಮಹಿಳೆಯರು…!