ಹುಬ್ಬಳ್ಳಿ ( HUBALLI ) ಯ ಖ್ಯಾತ ಉದ್ಯಮಿಯೊಬ್ಬರ ಪುತ್ರನ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ನಾಪತ್ತೆಯಾಗಿದ್ದ ಉದ್ಯಮಿ ಭರತ್ ಜೈನ್ ಮಗ ಅಖಿಲ್ ಜೈನ್ (30) ಮೃತದೇಹ ತೋಟದ ಮನೆಯಲ್ಲೇ ಪತ್ತೆಯಾಗಿದೆ.
ಮಗ ಅಖಿಲ್ ಜೈನ್ ( AKIL JAIN ) ಹತ್ಯೆಗೆ ಸುಪಾರಿ ಕೊಟ್ಟಿದ್ದೆ ತಂದೆ ಭರತ್ ಜೈನ್ ( BHARATH JAIN ) ಎನ್ನುವುದು ಪೊಲೀಸ್ ತನಿಖೆಯಲ್ಲಿ ಆಘಾತಕಾರಿ ಮಾಹಿತಿ ಬಯಲಾಗಿದೆ. ಹುಬ್ಬಳ್ಳಿ ತಾಲೂಕಿನ ದೇವರಗಿಡಿಹಾಳ ಗ್ರಾಮದಲ್ಲಿ ಭರತ್ ಜೈನ್ ಗೆ ಸೇರಿದ ತೋಟದ ಮನೆಯಲ್ಲಿ ಮಗನ ಮೃತದೇಹ ಪತ್ತೆಯಾಗಿದೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಪ್ರಕರಣ ದಾಖಲಾದ ಕೂಡಲೇ ಕೇಶ್ವಾಪುರ ಠಾಣೆ ಪೊಲೀಸ್ ಇನ್ಸಪೆಕ್ಟರ್ ಜಗದೀಶ ಹಂಚಿನಾಳ ನೇತೃತ್ವದ ತಂಡ ತನಿಖೆ ನಡೆಸಿ 48 ಗಂಟೆಯೊಳಗೆ ಪ್ರಕರಣವನ್ನು ಭೇದಿಸುವುದರ ಜೊತೆ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇದನ್ನೂ ಓದಿ : – ವಿಷ್ಣುವರ್ಧನ್ ಹೊಸ ಮನೆಗೆ ಭೇಟಿ ನೀಡಿದ ಯಶ್ ರಾಧಿಕಾ, ಸುದೀಪ್