ಧಾರವಾಡ (Dharwad) ದಲ್ಲಿ ಕುಡಿಯುವ ನೀರಿ (Drinking water) ಗಾಗಿ ಹಾಹಾಕಾರ ಉಂಟಾಗಿದ್ದು, ಕಂಗೆಟ್ಟ ಸಾರ್ವಜನಿಕರು ಖಾಲಿ ಕೊಡಗಳೊಂದಿಗೆ ರಸ್ತೆಗಿಳಿದು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಕಳೆದ 15 ದಿನಗಳಿಂದ ಕುಡಿಯುವ ನೀರು ಸಮರ್ಪಕವಾಗಿ ಪೂರೈಕೆಯಾಗದೆ ಸಾರ್ವಜನಿಕರು ನೀರಿಗಾಗಿ ಪರದಾಡುವಂತಾಗಿದೆ.
ಖಾಲಿ ಕೊಡ ಹಾಗೂ ಬಕೆಟ್ ಹಿಡಿದುಕೊಂಡು ಬಂದ ಮಹಿಳೆಯರು ಶಾಸಕ ಅಮೃತ ದೇಸಾಯಿ (Amruth desai), ಪಾಲಿಕೆ ಸದಸ್ಯ ನಿತಿನ್ ಇಂಡಿ ಹಾಗೂ ಮಹಾನಗರ ಪಾಲಿಕೆ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು. ಮಹಿಳೆಯರು ಕುಡಿಯುವ ನೀರಿಗಾಗಿ ಸವದತ್ತಿ ರಸ್ತೆ ಬಂದ್ ಮಾಡಿದ್ದರಿಂದ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಉಪನಗರ ಠಾಣೆ ಪೊಲೀಸರು ಮಧ್ಯೆ ಪ್ರವೇಶಿಸಿ ಪ್ರತಿಭಟನಾಕಾರರ ಮನವೊಲಿಸುವ ಕೆಲಸ ಮಾಡಿದರು. ಕಳೆದ 15 ದಿನಗಳಿಂದ ಕುಡಿಯುವ ನೀರಿಗಾಗಿ ಪರದಾಡುವಂತಾಗಿದೆ. ಕೂಡಲೇ ಈ ಸಮಸ್ಯೆ ಬಗೆಹರಿಸಿ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನು ಓದಿ : – ಅರುಣಾಚಲ ಪ್ರದೇಶದಲ್ಲಿ ಯುದ್ಧ ವಿಮಾನ ಗಸ್ತು ನಡೆಸುತ್ತಿರುವ ಭಾರತೀಯ ವಾಯುಪಡೆ