ನಿನ್ನೆ ಸುರಿದ ಭಾರಿ ಮಳೆಗೆ ಹಾವೇರಿ ಜಿಲ್ಲೆ ರೈತರು ಕಂಗಾಲಾಗಿದ್ದಾರೆ. ಅಕಾಲಿಕವಾಗಿ ಸುರಿದ ಆಲಿಕಲ್ಲು ಮಳೆಗೆ ಮೆಕ್ಕೆಜೋಳ, ಬಾಳೆ, ಅಡಿಕೆ ತೆಂಗು, ಸೇರಿದಂತೆ ಅಪಾರ ಪ್ರಮಾಣದ ತರಕಾರಿ ಬೆಳೆಗಳು ನಾಶವಾಗಿವೆ. ಹಾವೇರಿ ಜಿಲ್ಲೆಯ ಹಾನಗಲ್, ಬ್ಯಾಡಗಿ, ಹಿರೇಕೆರೂರ ತಾಲೂಕಿನಲ್ಲಿ ಬಿರುಗಾಳಿ ಸಹಿತ ಅಪಾರ ಪ್ರಮಾಣದ ಮಳೆಯಾಗಿದ್ದು ರೈತರು ಬೆಳೆದ ಬೆಳೆಗಳು ಕೈ ಸಿಗುವ ಮುಂಚೆಯೇ ನೆಲಕಚ್ಚಿವೆ. ಇನ್ನು ಹಿರೇಕೆರೂರು ತಾಲೂಕು ಯಮ್ಮಿಗನೂರು ಗ್ರಾಮಕ್ಕೆ ಕೃಷಿ ಸಚಿವ ಬಿಸಿ ಪಾಟೀಲ್ ಹಾಗೂ ಯಮ್ಮಿಗನೂರಿನಿಗೆ ತಹಶೀಲ್ದಾರ್ ಉಮಾ ಭೇಟಿ ನೀಡಿ ಮಳೆಯಿಂದ ಹಾಳಾದ ಬೆಳೆಗಳನ್ನು ವೀಕ್ಷಣೆ ಮಾಡಿ ರೈತರಿಗೆ ಧೈರ್ಯ ತುಂಬಿದರು.
ಸಂಬಂಧಿಸಿದ ಅಧಿಕಾರಿಗಳಿಗೆ ಪರಿಶೀಲನೆ ಮಾಡಲು ಹೇಳಿದರು. ಅಲ್ಲದೇ ಇಂತಹ ಘಟನೆಗಳು ಗಮನಕ್ಕೆ ಬಂದ ತಕ್ಷಣ ಸ್ಥಳೀಯವಾಗಿರುವ ಅಧಿಕಾರಿಗಳು ಜನಪ್ರತಿನಿಧಿಗಳು ಮೊದಲು ಭೇಟಿ ನೀಡಿ ಸಾರ್ವಜನಿಕರ ಅಳಲನ್ನು ಕೇಳಬೇಕು. ಸ್ಥಳೀಯವಾಗಿ ಸಮಸ್ಯೆಗಳು ಪರಿಹಾರವಾಗುವುದಾದರೆ ಸ್ಥಳೀಯವಾಗಿಯೇ ಮೊದಲು ಪರಿಹರಿಸಿ ಜನರಿಗೆ ಸ್ಪಂದಿಸಬೇಕು ಎಂದು ಸೂಚಿಸಿದರು. ಬೆಳೆ ನಷ್ಟವನ್ನು ಸರ್ಕಾರದ ಗಮನಕ್ಕೆ ತರುವುದಾಗಿ ಬಿ.ಸಿ.ಪಾಟೀಲ್ ಹೇಳಿದರು.