ಕಾಂಗ್ರೆಸ್ ನವರು ಸತ್ಯ ಹರಿಶ್ಚಂದ್ರರು ಅಂತ ಅವರ ಆತ್ಮವನ್ನ ಮುಟ್ಟಿ ನೋಡಿಕೊಳ್ಳಲಿ – ಬಿ.ಸಿ ಪಾಟೀಲ್

ಬೊಮ್ಮಾಯಿ ( bommai ) ಯವರು ಸಿಎಂ ಆದಾಗಿನಿಂದ ಕಾಂಗ್ರೆಸ್ ನವರು ಅವರ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ( b.c patil ) ಕಿಡಿಕಾರಿದ್ದಾರೆ.

ಬೊಮ್ಮಾಯಿ ( bommai ) ಯವರು ಸಿಎಂ ಆದಾಗಿನಿಂದ ಕಾಂಗ್ರೆಸ್ ನವರು ಅವರ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ( b.c patil ) ಕಿಡಿಕಾರಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ ಅವರು, ಬೊಮ್ಮಾಯಿಯವರು ಅಧಿಕಾರ ಕಳೆದುಕೊಳ್ಳುತ್ತಾರೆ. ಅವರನ್ನು ಮಂತ್ರಿ ಸ್ಥಾನದಿಂದ ತೆಗೆದು ಬಿಡುತ್ತಾರೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ.

ಆದರೆ, ಬೊಮ್ಮಾಯಿಯವರು ಯಶಸ್ವಿಯಾಗಿ, ಪ್ರಾಮಾಣಿಕವಾಗಿ ಕೆಲಸ ಮಾಡ್ತಿದ್ದಾರೆ. ಬೊಮ್ಮಾಯಿ ಹದಿನೈದು ಗಂಟೆ ಕೆಲಸ ಮಾಡಿ ಜನಾನುರಾಗಿ ಸಿಎಂ ಆಗಿದ್ದಾರೆ. ಇದರಿಂದಾಗಿ ಕಾಂಗ್ರೆಸ್ ನವರಿಗೆ ಭಯ ಹುಟ್ಟಿದೆ ಎಂದು ಹೇಳಿದರು. ಬೊಮ್ಮಾಯಿ, ಯಡಿಯೂರಪ್ಪ ನೇತೃತ್ವದಲ್ಲಿ ಕಾಂಗ್ರೆಸ್ ( congress ) ನವರು ನಾವೆಲ್ಲಿ ಠೇವಣಿ ಕಳೆದುಕೊಳ್ತೇವೋ ಅನ್ನೋ ಭಯದಿಂದ ಅಪಪ್ರಚಾರ ಮಾಡುತ್ತಿದ್ದಾರೆ. ಅದು ನಾಚಿಕೆಗೇಡಿನ ಸಂಗತಿಯಾಗಿದೆ. ಸಂವಿಧಾನಾತ್ಮಕ ಸಿಎಂ ವಿರುದ್ಧ ಈ ರೀತಿ ಹೇಳೋದು ಸರಿಯಲ್ಲ. ಅವರೆಷ್ಟು ಸತ್ಯಹರಿಶ್ಚಂದ್ರರು ಅನ್ನೋ ಬಗ್ಗೆ ಅವರು ಆತ್ಮಮುಟ್ಟಿ ನೋಡಿಕೊಳ್ಳಲಿ ಎಂದು ಕಿಡಿಕಾರಿದ್ರು. ಇದನ್ನೂ ಓದಿ : – ಮೊಹಮದ್ ಪೈಗಂಬರ್ ಬಗ್ಗೆ ಪ್ರಬಂಧ ಸ್ಪರ್ಧೆ – ಶಾಲೆಗೆ ನುಗ್ಗಿದ ಶ್ರೀರಾಮಸೇನೆ ಕಾರ್ಯಕರ್ತರಿಂದ ವಿರೋಧ


ಮುಂಜಾಗ್ರತಾ ಕ್ರಮವಾಗಿ ಪಿಎಫ್ಐ ( pfi ) ಸಂಘಟನೆಯ ಮುಖಂಡರನ್ನು ಬಂಧಿಸುತ್ತಿದ್ದಾರೆ. ಮುಂದೆ ಆ ಸಂಘಟನೆಯನ್ನು ಬ್ಯಾನ್ ಮಾಡಬೇಕೋ ಏನೋ ಅನ್ನೋದರ ಬಗ್ಗೆ ಸರ್ಕಾರ ತೀರ್ಮಾನ ಮಾಡುತ್ತದೆ. ಇಲ್ಲಿ ಲಾಭ ನಷ್ಟದ ಪ್ರಶ್ನೆಯಿಲ್ಲ. ದೇಶವನ್ನು ಉಳಿಸೋದು, ಶಾಂತಿ ಕಾಪಾಡೋದು ಬಹಳ ಮುಖ್ಯ. ಲಾಭ ನಷ್ಟದ ಬಗ್ಗೆ ಚಿಂತನೆ ಮಾಡೋ ಅವಶ್ಯಕತೆ ಇಲ್ಲ ಎಂದರು.

ಇದನ್ನೂ ಓದಿ : – ಕಟೀಲ್ ಓರ್ವ ವಿದೂಷಕ ಇದ್ದಂಗೆ – ಮಾಜಿ ಸಿಎಂ ಸಿದ್ದರಾಮಯ್ಯ ವ್ಯಂಗ್ಯ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!