ಇಂದು ಬೆಳಗ್ಗೆ ಸಿದ್ದರಾಮಯ್ಯ ( siddaramaiaha ) ಮೈಸೂರಿನ ಆಂದೋಲನ ವೃತ್ತದ ಬಳಿ ಪಾರ್ಕ್ ನಲ್ಲಿ ವಾಕ್ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಅಲ್ಲಿಗೆ ಕೋಲಾರ ( kolara ) ದಿಂದ ಬಂದ ಕಾರ್ಯಕರ್ತರು ಸಿದ್ದರಾಮಯ್ಯ ಜೊತೆ ಮಾತನಾಡಿದ್ದಾರೆ.
ಅಲ್ಲದೆ ಮುಂದಿನ ಚುನಾವಣೆ ಗೆ ನೀವು ಕೋಲಾರದಿಂದಲೇ ಸ್ಪರ್ಧೆ ಮಾಡಬೇಕು ಎಂದು ಒತ್ತಡ ಹಾಕಿದ್ದಾರೆ. 30ಕ್ಕೂ ಹೆಚ್ಚು ಕೈ ಕಾರ್ಯಕರ್ತರು ಕೋಲಾರದಿಂದ ಆಗಮಿಸಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ. ಇದನ್ನೂ ಓದಿ : – ಎಲಾನ್ ಮಸ್ಕ್ ತೆಕ್ಕೆಗೆ ಟ್ವಿಟ್ಟರ್ – CEO ಪರಾಗ್ ಅಗರ್ವಾಲ್ ಸೇರಿದಂತೆ ಪ್ರಮುಖರು ವಜಾ
ಕಾರ್ಯಕರ್ತರು ಒತ್ತಾಯ ಮಾಡಿದಾಗ ಸಿದ್ದರಾಮಯ್ಯ ಅವರು, ಸರಿ ಒಂದು ದಿನ ಅಲ್ಲಿಗೆ ಬರುತ್ತೇನೆ ಮಾತನಾಡುತ್ತೇನೆ ಎಂದು ಭರವಸೆ ನೀಡಿದರು. ನಂತರ ಮಾಜಿ ಸಿಎಂಗೆ ಹಾರ ಹಾಕಿ ಕಾರ್ಯಕರ್ತರು ಗೌರವಿಸಿದ್ದಾರೆ.
ಇದನ್ನೂ ಓದಿ : – ಚಾಲಕನ ನಿಯಂತ್ರಣ ತಪ್ಪಿ ಲಾರಿ ಮರಕ್ಕೆ ಡಿಕ್ಕಿ – ಸ್ಥಳದಲ್ಲೇ ಇಬ್ಬರು ಸಾವು