ದಸರೆ (Dussehra) ಗೆ ಕಾಡಿನಿಂದ ನಾಡಿಗೆ ಆಗಮಿಸಿದ್ದ ಲಕ್ಷ್ಮಿ (Lakshmi) ಆನೆ ಸೆ.13ರಂದು ಅರಮನೆ ಕೋಡಿ ಸೋಮೇಶ್ವರ ದೇಗುಲ (Someshwara temple) ದ ಬಳಿ ಗಂಡು ಮರಿಗೆ ಜನ್ಮ ನೀಡಿತ್ತು. ಆನೆ ಮರಿಗೆ ಶ್ರೀ ದತ್ತಾತ್ರೇಯ (Dattatreya) ಅಂತಾ ರಾಣಿ ಪ್ರಮೋದಾದೇವಿ ಒಡೆಯರ್ (Pramodadevi odeyar) ನಾಮಕರಣ ಮಾಡಿದ್ದಾರೆ.
ವಿಶ್ವವಿಖ್ಯಾತ ಮೈಸೂರು ದಸರಾ (Dussehra) ಗೆ ಆಗಮಿಸಿರುವ ಲಕ್ಷ್ಮೀ ಆನೆ, ಅರಮನೆಯಲ್ಲಿ ಗಂಡು ಮರಿಗೆ ಜನ್ಮ ನೀಡಿತ್ತು. ಲಕ್ಷ್ಮೀ ಆನೆ ಕ್ಯಾಂಪ್ನಲ್ಲಿ ಗರ್ಭಿಣಿ ಎಂದು ತಿಳಿದಿರಲಿಲ್ಲ. ಅರಮನೆಗೆ ಬಂದ ಮೇಲೆ ಒಳ್ಳೆಯ ಆಹಾರ ನೀಡಲಾಗಿತ್ತು. ಪ್ರತಿನಿತ್ಯ ವಾಕಿಂಗ್ ಮಾಡಿರುವುದು ಆನೆಗೆ ಸಹಾಯವಾಗಿದೆ. ಕೇವಲ 10 ನಿಮಿಷದಲ್ಲಿ ಲಕ್ಷ್ಮೀ ಮರಿ ಆನೆಗೆ ಜನ್ಮ ನೀಡಿದೆ. ಎಲ್ಲಾ ಆನೆಗಳ ರಿಪೋರ್ಟ್ ಪಡೆದ ನಂತರ ದಸರಾಗೆ ಕರೆತರಲಾಗಿದೆ. ತಾಯಿ ಮತ್ತು ಮಗ ಇಬ್ಬರು ಆರೋಗ್ಯವಾಗಿದ್ದಾರೆ ಎಂದು ಅರಮನೆಯಲ್ಲಿ ಡಿಸಿಎಫ್ ಕರಿಕಾಳನ್ ತಿಳಿಸಿದ್ದಾರೆ. ಇನ್ನೂ ವಿಶ್ವ ವಿಖ್ಯಾತ ದಸರೆಗೆ ಕ್ಷಣಗಣನೆ ಆರಂಭವಾಗಿದ್ದು, ವಿವಿಧೆಡೆ ಸಿದ್ಧತೆ ನಡೆಯುತ್ತಿದೆ. ಜಂಬೂ ಸವಾರಿಗೆ ಆಗಮಿಸಿರುವ ಆನೆಗಳ ಭರ್ಜರಿ ತಾಲೀಮು ನಡೆಯುತ್ತಿದೆ. ಇದನ್ನೂ ಓದಿ : – ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಹತ್ಯೆಗೆ ನಡೆಯಿತಾ ಯತ್ನ…?
ಸುರಕ್ಷತಾ ದೃಷ್ಟಿಯಿಂದ ಅರಮನೆಯಲ್ಲೇ ಲಕ್ಷ್ಮಿ ಆನೆ ಹಾಗೂ ಮರಿಯನ್ನು ಪ್ರತ್ಯೇಕವಾದ ವ್ಯವಸ್ಥೆ ಮಾಡಿ ಇರಿಸಲಾಗಿದೆ. ಮಾಧ್ಯಮದವರು ಸೇರಿ ಯಾರು ಆನೆ ಹಾಗೂ ಮರಿ ಹತ್ತಿರ ಹೋಗದಂತೆ ಅಧಿಕಾರಿಗಳು ಮನವಿ ಮಾಡಿದ್ದು, ಮುಂದಿನ ದಿನದಲ್ಲಿ ಫೋಟೋ, ವಿಡಿಯೋ ನಾವೇ ಕೊಡುವುದಾಗಿ ಡಿಸಿಎಫ್ ಡಾ. ಕರಿಕಾಳನ್ ತಿಳಿಸಿದ್ದಾರೆ.
ಇದನ್ನೂ ಓದಿ : – ರಾಷ್ಟ್ರ ರಾಜಕಾರಣದಲ್ಲಿ ತಲ್ಲಣ…! -ಮತ್ತೆ ಒಂದಾಗ್ತಾರಾ ಮಾಜಿ ಮಿತ್ರರು?