ಮೈಸೂರು (Mysuru) ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿ (Manasagangotri) ಆವರಣದಲ್ಲಿ ಶುಕ್ರವಾರ ಸಂಜೆ ಅಪರಿಚಿತ ವಾಹನ ಡಿಕ್ಕಿಯಾಗಿ ಕೇಂದ್ರ ಗುಪ್ತಚರ ದಳದ ನಿವೃತ್ತ ಅಧಿಕಾರಿ ಆರ್.ಎನ್ ಕುಲಕರ್ಣಿ (RN.Kulkarni) ಮೃತಪಟ್ಟಿದ್ದರು. ಈ ಕೇಸ್ ಸಂಬಂಧ ಘಟನಾ ಸ್ಥಳದಲ್ಲಿ ಸಿಕ್ಕ ಮಾಹಿತಿ ಆಧರಿಸಿ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ಚುರುಕುಗೊಳಿಸಿದ್ದಾರೆ.
ಆದರೆ ಇನ್ನೂ ಕೂಡ ಆರೋಪಿಗಳ ಸುಳಿವು ಪತ್ತೆಯಾಗಿಲ್ಲ. ಪೊಲೀಸರು ಈ ಪ್ರಕರಣವನ್ನು ಬೇರೆ ಬೇರೆ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ಕೇಂದ್ರ ಗುಪ್ತಚರ ದಳದ ನಿವೃತ್ತ ಅಧಿಕಾರಿ ಆರ್.ಎನ್.ಕುಲಕರ್ಣಿ ಕೊಲೆ ಬಗ್ಗೆ ವಿಶೇಷ ತಂಡದಿಂದ ತನಿಖೆ ನಡೆಯುತ್ತಿದೆ. ನವೆಂಬರ್ 4 ರಂದು ಸಂಜೆ ಆರ್.ಎಸ್.ಕುಲಕರ್ಣಿ ಅವರು ಕ್ಯಾಂಪಸ್ ನ ಕಂಪ್ಯೂಟರ್ ಸೈನ್ಸ್ ವಿಭಾಗದ ಪಕ್ಕದ ರಸ್ತೆಯಲ್ಲಿ ವಾಕ್ ಮಾಡುತ್ತಿದ್ದರು. ಈ ವೇಳೆ ಕಾರು ಡಿಕ್ಕಿಯಾಗಿದೆ. ಇದರಿಂದ ಗಾಯಗೊಂಡಿದ್ದ ಆರ್.ಎಸ್.ಕುಲಕರ್ಣಿ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕುಲಕರ್ಣಿ ಕುಟುಂಬಸ್ಥರು ಇದೊಂದು ಕೊಲೆ ಎಂದು ಆರೋಪ ಮಾಡಿದ್ದರು. ಜಯಲಕ್ಷ್ಮೀ ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾರು ಅಪಘಾತ ಮಾಡಿದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ನಿವೃತ್ತ ಅಧಿಕಾರಿ ಪಕ್ಕಕ್ಕೆ ಹೋದರು, ಡಿಕ್ಕಿ ಹೊಡೆದಿದ್ದಾರೆ. ಅಪಘಾತಕ್ಕೆ ನಂಬರ್ ಪ್ಲೇಟ್ ಇಲ್ಲದ ಕಾರು ಬಳಸಿದ್ದು, ಯೋಜಿತ ಕೊಲೆ ಎಂದು ಶಂಕೆ ವ್ಯಕ್ತವಾಗಿದೆ.
ಇದನ್ನೂ ಓದಿ : – ಶಾಸಕ ರೇಣುಕಾಚಾರ್ಯ ಸಹೋದರನ ಮಗನ ಸಾವು ಪ್ರಕರಣ – ವಿನಯ್ ಗುರೂಜಿಯಿಂದ ಮಾಹಿತಿ ಕಲೆ ಹಾಕಿದ ಪೊಲೀಸರು