ರಾಮನಗರ( ramanagar ) ದಲ್ಲಿ ರಾಜಕೀಯ ಪಕ್ಷಗಳ ನಡುವೆ ಕಿತ್ತಾಟ ಜೋರಾಗುತ್ತಿದೆ. ಈಗ ಮತ್ತೆ ಮಾಗಡಿ ತಾಲೂಕಿನ ಕಾಮಸಾಗರ( kamasagara ) ಗ್ರಾಮದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡ ಉದ್ಘಾಟನೆ ವಿಚಾರವಾಗಿ ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ಮಾಜಿ ಶಾಸಕ ಹೆಚ್.ಸಿ.ಬಾಲಕೃಷ್ಣ ( h.c bala krishna ) ಕಾರಿನ ಮೇಲೆ ಕಲ್ಲು ತೂರಿದ್ದಾರೆ.
ಇಂದು ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಕಾಮಸಾಗರ ಗ್ರಾಮದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡ ಉದ್ಘಾಟನೆಗೆ ಮಾಜಿ ಕಾಂಗ್ರೆಸ್ ( congress ) ಶಾಸಕ ಹೆಚ್.ಸಿ.ಬಾಲಕೃಷ್ಣ ಆಗಮಿಸಿದ್ದರು. ಇದಕ್ಕೆ ಜೆಡಿಎಸ್ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದರು. ಇನ್ನೂ ಕಾರ್ಯಕ್ರಮದ ಬ್ಯಾನರ್ ನಲ್ಲಿ ಶಾಸಕ ಮಂಜುನಾಥ್ ಹೆಸರು ಕೊನೆಯಲ್ಲಿ ಹಾಕಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿ ಗಲಾಟೆ ಮಾಡಿದ್ದಾರೆ. ಇದನ್ನೂ ಓದಿ : – ರಾಹುಲ್ ಗಾಂಧಿ ಜೊತೆ ಹೆಜ್ಜೆ ಹಾಕಿದ ಬಾಲಿವುಡ್ ನಟಿ ಪೂಜಾ ಭಟ್
ಇದರ ಮಧ್ಯಯೇ ಬಾಲಕೃಷ್ಣ ಕಟ್ಟಡವನ್ನು ಉದ್ಘಾಟಿಸಿ ಕಾರಿನಲ್ಲಿ ವಾಪಸ್ ಆಗುತ್ತಿರುವಾಗ ಕಾರಿನ ಮೇಲೆ ಜೆಡಿಎಸ್ ( jds ) ಕಾರ್ಯಕರ್ತರು ಕಲ್ಲು ತೂರಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಕುದೂರು ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ದೌಡಾಯಿಸಿ ಪರಿಸ್ಥಿತಿ ತಿಳಿಗೊಳಸಿದ್ದಾರೆ .
ಇದನ್ನೂ ಓದಿ : – ಪಕ್ಷದಿಂದ ವಲಸೆ ಹೋದವರಿಗೂ ಮುಕ್ತ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್