ನಾನು ಎಲ್ಲಿ ಸ್ವರ್ಧೆ ಮಾಡಬೇಕು ಎಂಬುದು ಪಕ್ಷಕ್ಕೆ ಬಿಟ್ಟ ತೀರ್ಮಾನ – ನಿಖಿಲ್ ಕುಮಾರಸ್ವಾಮಿ

ಕೋಲಾರ ( kolara ) ದಲ್ಲಿ ಪಂಚರತ್ನ ರಥಯಾತ್ರೆ ವಿಚಾರಕ್ಕೆ ಸಂಬಂಧಿಸಿದಂತೆ ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ( nikil kumarswamy ) ಪ್ರತಿಕ್ರಿಯೆ ನೀಡಿದ್ದಾರೆ.

ಇಂದು ಐದನೇ ದಿನಕ್ಕೆ ಪಂಚರತ್ನ ರಥಯಾತ್ರೆ ಕಾಲಿಟ್ಟಿದೆ. ಪ್ರತಿ ತಾಲೂಕಿನಲ್ಲೂ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿದೆ. ಯುವಕರು ಹೆಚ್ಚಾಗಿ ಪಾಲ್ಗೊಳ್ಳುತ್ತಿದ್ದಾರೆ. ಪಕ್ಷ ಸಂಘಟನೆ ಮಾಡಲು ನನಗೆ ಜವಾಬ್ದಾರಿ ನೀಡಲಾಗಿದೆ. ಉತ್ತರ ಕರ್ನಾಟಕ ಭಾಗದಲ್ಲೂ ಪಕ್ಷ ಸಂಘಟನೆ ಮಾಡಲಾಗುತ್ತಿದೆ. ನಾನು ಎಲ್ಲಿ ಸ್ವರ್ಧೆ ಮಾಡಬೇಕು ಎಂಬುದು ಪಕ್ಷಕ್ಕೆ ಬಿಟ್ಟ ತೀರ್ಮಾನ ಎಂದು ತಿಳಿಸಿದ್ರು. ಇದನ್ನೂ ಓದಿ : – ರಮೇಶ್ ಕುಮಾರ್ ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಹೆಚ್ಡಿಕೆ – ವಿಡಿಯೋ ವೈರಲ್

ಮಾಜಿ ಸಚಿವ ಯೋಗೇಶ್ವರ್ ಟೀಕೆ ವಿಚಾರವಾಗಿ ಮಾತನಾಡಿದ ಅವರು, ಮಾಜಿ ಸಚಿವರು ಹತಾಶರಾಗಿದ್ದಾರೆ. ಅವರಿಗೆ ಭಯದ ವಾತವರಣ ಕಾಣುತ್ತಿದೆ. 2018 ರಲ್ಲಿ ಆದ ಪರಿಸ್ಥಿತಿ ಆಗುತ್ತದೆ ಎಂದು ಆತಂಕ ಸೃಷ್ಠಿ ಆಗಿದೆ. ಅವರ ಬಗ್ಗೆ ಚರ್ಚೆ ಮಾಡಿ ಸಮಯ ವ್ಯರ್ಥ ಮಾಡಿಕೊಳ್ಳುವುದಿಲ್ಲ. ಕಳೆದ 18 ವರ್ಷ ಅವರಿಗೆ ಜನ ಆಶೀರ್ವಾದ ಮಾಡಿದ್ರು. ಅವಾಗ ಯೋಗೇಶ್ವರ್ ( yogeshwar ) ಎಲ್ಲಿಗೆ ಹೋಗಿದ್ರು. ತಾಲೂಕು ಅಭಿವೃದ್ಧಿ ಮಾಡಲು 18 ವರ್ಷ ಬೇಕಿತ್ತಾ. ಕುಮಾರಸ್ವಾಮಿ ನಾಲೂವರೆ ವರ್ಷದಲ್ಲಿ ಮಾಡಿ ತೋರಿಸಿದ್ದಾರೆ. ಇದನ್ನ ಸಹಿಸಲು ಯೋಗೇಶ್ವರ್ ಕೈಯಲ್ಲಿ ಆಗುತ್ತಿಲ್ಲ. ತಾಲೂಕಿನ ಅಭಿವೃದ್ಧಿ ವಿಚಾರವಾಗಿ ನಾವು ಗೊಂದಲ ಮೂಡಿಸುವುದಿಲ್ಲ. ಯಾರು ಬೇಕಾದರೂ ಅಭಿವೃದ್ಧಿ ಮಾಡಲಿ ಎಂದು ಯೋಗೇಶ್ವರ್ ವಿರುದ್ಧ ವಾಗ್ದಾಳಿ ನಡೆಸಿದ್ರು.

ಇದನ್ನೂ ಓದಿ : –  ವಶಕ್ಕೆ ಪಡೆದಿರುವ 26 ರೌಡಿಗಳ ವಿಚಾರಣೆ ನಡೆಸಲಾಗುತ್ತಿದೆ – ಸಿಸಿಬಿ ಜಂಟಿ ಆಯುಕ್ತ ಶರಣಪ್ಪ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!