ಮಾಜಿ ಸಿಎಂ ಸಿದ್ದರಾಮಯ್ಯ ( SIDDARAMAIAH ) ಇದ್ದ ಕ್ಷೇತ್ರವನ್ನು ಬಿಟ್ಟು ಬೇರೆ ಕಡೆ ಯಾಕೆ ಹೋಗ್ತಿದ್ದಾರೆ ಅಂತಾ ನಮಗೆ ಅರ್ಥವಾಗುತ್ತಿಲ್ಲ. ಅಲ್ಲಿ ಒಳ್ಳೆಯ ಕೆಲಸ ಮಾಡಿದ್ದೇನೆ, ಮುಂದೆ ಗೆಲ್ತೀನಿ ಅನ್ನೋ ವಿಶ್ವಾಸ ಇಲ್ಲದೇನೆ ಬೇರೆ ಜಾಗ ಹುಡುಕುತ್ತಿದ್ದಾರೆ. ನಾನು ಅದಕ್ಕೆ ಟೀಕೆ ಟಿಪ್ಪಣಿ ಮಾಡಲು ಇಷ್ಟ ಪಡಲ್ಲ. ಜನ ಅದನ್ನ ನಿರ್ಧರಿಸುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ( B.S YEDIURAPPA ) ಹೇಳಿದ್ದಾರೆ.
ಪತ್ನಿಯ ಹೆಸರಿನ ಕಲ್ಯಾಣ ಮಂಟಪ ಉದ್ಘಾಟನೆ ಬಳಿಕ ಮಾತನಾಡಿದ ಅವರು, ಕೆಂಪೇಗೌಡ ಪ್ರತಿಮೆ ಅನಾವರಣಕ್ಕೆ ದೇವೇಗೌಡರಿಗೆ ಆಹ್ವಾನ ನೀಡಿಲ್ಲ ಅನ್ನೋ ವಿಚಾರಕ್ಕೆ ಪ್ರತಿಕ್ರಿಯಿಸಿ, ನನಗೆ ಗೊತ್ತಿರೋ ಪ್ರಕಾರ ಆಮಂತ್ರಣ ಪತ್ರಿಕೆ ಮಾಡಿರಲಿಲ್ಲ. ವೈಯಕ್ತಿಕವಾಗಿ ಪ್ರತಿಯೊಬ್ಬರಿಗೆ ಪತ್ರ ಬರೆದು ಸಿಎಂ ಆಹ್ವಾನಿಸಿದ್ದಾರೆ. ಎಸ್.ಎಂ. ಕೃಷ್ಣ ಸೇರಿದಂತೆ ಉಳಿದೆಲ್ಲ ನಾಯಕರು ಬಂದಿದ್ರು. ದೇವೆಗೌಡ( DEVEGOWDA ) ರಿಗೂ ಪತ್ರ ಬರೆದು ಸಿಎಂ ದೂರವಾಣಿ ಕರೆ ಮಾಡಿಯೂ ಆಹ್ವಾನಿಸಿದ್ದಾರೆ. ಈ ಬಗ್ಗೆ ಅನಗತ್ಯವಾಗಿ ಚರ್ಚೆಯಾಗ್ತಾ ಇದೆ. ದೇವೇಗೌಡರು ಈ ವಿಚಾರವನ್ನ ವೈಯಕ್ತಿಕವಾಗಿ ತೆಗೆದುಕೊಳ್ಳಲ್ಲ ಅನ್ನೋ ವಿಶ್ವಾಸ ನನಗಿದೆ. ಯಾವುದೋ ಕಾರಣಕ್ಕೆ ಅವರಿಗೆ ಬರಲಿಕ್ಕೆ ಆಗಿಲ್ವೇನೋ. ಅದನ್ನ ದೊಡ್ಡದು ಮಾಡೋ ಅವಶ್ಯಕತೆ ಇಲ್ಲ ಎಂದು ಹೇಳಿದರು. ಇದನ್ನೂ ಓದಿ : – ಚುನಾವಣೆ ಟಿಕೆಟ್ ಸಿಗದಿದ್ದಕ್ಕೆ ವಿದ್ಯುತ್ ಟವರ್ ಏರಿದ AAP ಮುಖಂಡ
ಟಿಪ್ಪು ಪ್ರತಿಮೆ, ಬಸವಣ್ಣ ಪ್ರತಿಮೆ ನಿರ್ಮಾಣ ವಿಚಾರದ ಕುರಿತು ಮಾತನಾಡಿ, ಟಿಪ್ಪು ಪ್ರತಿಮೆ ನಿರ್ಮಿಸುವುದು ಅವರಿಗೆ ಬಿಟ್ಟ ವಿಚಾರ. ಸರ್ಕಾರ ಏನು ತೀರ್ಮಾನ ಮಾಡುತ್ತೆ ನೋಡೋಣ. ವಿಧಾನಸೌಧದ ಮುಂದೆ ಬಸವಣ್ಣನವರ ಪ್ರತಿಮೆ ನಿರ್ಮಾಣ ಮಾಡಲು ಕ್ಯಾಬಿನೆಟ್ ಒಪ್ಪಿಗೆ ದೊರೆತಿದೆ. ಮುಂದೆ ಮುಖ್ಯಮಂತ್ರಿಗಳು ಅದನ್ನ ಮಾಡ್ತಾರೆ ಎಂದು ತಿಳಿಸಿದರು.
ಹಿಂದೂ ಅಶ್ಲೀಲ ಪದ ಎಂಬ ಸತೀಶ್ ಜಾರಕಿಹೊಳಿ ಹೇಳಿಕೆ ಬಗ್ಗೆ ಉತ್ತರಿಸಿದ ಬಿಎಸ್ವೈ, ಅದರ ಬಗ್ಗೆ ನಾನು ಏನನ್ನೂ ಹೇಳಲೂ ಇಷ್ಟಪಡಲ್ಲ. ಕಾಂಗ್ರೆಸ್ ನ 90% ನಾಯಕರು ಕೂಡ ನಾವು ಮೊದಲು ಹಿಂದೂಗಳು ಅನ್ನೋದನ್ನ ಒಪ್ಪಿಕೊಳ್ತಾರೆ. ಇದನ್ನ ಅರ್ಥ ಮಾಡಿಕೊಂಡು ಎಲ್ಲರೂ ಮುಂದೆ ಹೋಗಬೇಕು ಎಂದು ಹೇಳಿದರು.
ಇದನ್ನೂ ಓದಿ : – ನಾನು ಕೋಲಾರದ ಜನತೆಗೆ ಅಭಾರಿಯಾಗಿದ್ದೇನೆ – ಸಿದ್ದರಾಮಯ್ಯ