ಉತ್ತರ ಕನ್ನಡ(Uttara Kannada) ಜಿಲ್ಲೆಯ ಜನರ ಹಲವು ವರ್ಷಗಳ ಬೇಡಿಕೆಯಾಗಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಕರ್ನಾಟಕ ಸರ್ಕಾರವು ತಾತ್ವಿಕ ಒಪ್ಪಿಗೆ ನೀಡಿದೆ. ಈ ಸಂಬಂಧ ಉತ್ತರ ಕನ್ನಡ ಜಿಲ್ಲೆಯ ಎಲ್ಲ ಶಾಸಕರೂ ಒಗ್ಗೂಡಿ ಆರೋಗ್ಯ ಸಚಿವರು ಹಾಗೂ ಮುಖ್ಯಮಂತ್ರಿಯನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದರು. ಆರೋಗ್ಯ ಸಚಿವರ ಸಮಕ್ಷಮ ನಡೆದ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಪ್ರಕಟಿಸಲಾಗಿದೆ.
ಉತ್ತರ ಕನ್ನಡ ಜಿಲ್ಲೆಗೆ ಶೀಘ್ರವೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( basavarj bmmai ) ಹಾಗೂ ಆರೋಗ್ಯ ಸಚಿವ ಡಾ ಕೆ.ಸುಧಾಕರ್ ಭೇಟಿ ನೀಡಲಿದ್ದಾರೆ. ಜಿಲ್ಲೆಯ ಯಾವ ಭಾಗದಲ್ಲಿ ಆಸ್ಪತ್ರೆ ನಿರ್ಮಿಸಿದರೆ ಹೆಚ್ಚು ಅನುಕೂಲವಾಗುತ್ತದೆ ಎಂಬುದನ್ನು ಪರಿಶೀಲಸಿದ ನಂತರ ಅಂತಿಮ ತೀರ್ಮಾನ ಪ್ರಕಟಿಸಲಾಗುವುದು ಎಂದು ಸಭೆಯಲ್ಲಿ ತಿಳಿಸಿಲಾಯಿತು. ಸದ್ಯದ ಮಟ್ಟಿಗೆ ಕಾರವಾರದಲ್ಲಿ ಇರುವ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸುವುದು ಹಾಗೂ ಕುಮುಟಾದಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಮಾಡಲು ಚಿಂತನೆ ನಡೆದಿದೆ ಎಂದು ಸಚಿವ ಸುಧಾಕರ್ ತಮ್ಮನ್ನು ಭೇಟಿ ಮಾಡಿದ ಶಾಸಕರಿಗೆ ತಿಳಿಸಿದರು. ಸಚಿವರ ಉತ್ತರದ ನಂತರ ಶಾಸಕರು ಸಮಾಧಾನಗೊಂಡರು.
ಇದನ್ನೂ ಓದಿ : – ರಾಜಕೀಯ ಪಕ್ಷಗಳ ಬೇಕಾಬಿಟ್ಟಿ ದೇಣಿಗೆ ಸಂಗ್ರಹಕ್ಕೆ ಕಡಿವಾಣ ಹಾಕಲು ಮುಂದಾದ ಚುನಾವಣಾ ಆಯೋಗ