ಮೋದಿ (Modi) ವಿಶ್ವ ಗುರು ಅಲ್ಲ ಪುಕ್ಕಲು ಗುರು ಎಂಬ ಸಿದ್ದರಾಮಯ್ಯ (Siddaramaiah) ಟ್ವೀಟ್ ವಿಚಾರಕ್ಕೆ ವಿಜಯಪುರ (Vijayapura) ದಲ್ಲಿ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ (K.S. Eshwarappa) ಪ್ರತಿಕ್ರಿಯೆ ನೀಡಿದ್ದಾರೆ .ಪಾಕಿಸ್ತಾನಕ್ಕೆ ಕೇಳಿ ಮೋದಿ ಯಾವ ಗುರು ಅಂತ ಹೇಳ್ತಾರೆ.
ಸರ್ಜಿಕಲ್ ಸ್ಟ್ರೈಕ್ ಆಯ್ತು ಅದು ಗೊತ್ತಿತ್ತಾ ಅವರಿಗೆ ? ಅದು ಆದ ಮೇಲೆ ಒಂದು ಹೆಜ್ಜೆ ಆದ್ರೂ ಅವರು ಮುಂದೆ ಬಂದಿದ್ದಾರಾ ಎಂದು ಪ್ರಶ್ನಿಸಿದ್ರು. ಪುಕ್ಕಲು ಯಾರು ಅನ್ನೋದು ಇಡೀ ವಿಶ್ವ ನೋಡತ್ತೆ. ಮೋದಿ ಪ್ರಧಾನಿ ಆಗುವ ಮುಂಚೆ ಇಡೀ ವಿಶ್ವ ಪಾಕಿಸ್ತಾನದ ಜೊತೆ ಇತ್ತು ಭಾರತ ಒಬ್ಬಂಟಿಯಾಗಿತ್ತು ಎಂದು ಹೇಳಿದ್ರು. ಇಂದು ಎಲ್ಲರೊಂದಿಗೆ ಸ್ನೇಹ ಮಾಡಿ ಶಸ್ತ್ರಾಸ್ತ್ರ ಜಾಸ್ತಿ ಮಾಡಿಕೊಂಡು ಬಜೆಟ್ ನಲ್ಲಿ ಹೆಚ್ಚಿನ ಹಣ ಅದಕ್ಕೆ ಮೀಸಲು ಇಟ್ಟಿದ್ದರು. ಇಂದು ಇಡಿ ವಿಶ್ವ ಭಾರತದೊಂದಿಗೆ ಇದೆ ಪಾಕಿಸ್ತಾನ ಒಬ್ಬಂಟಿಯಾಗಿದೆ. ಪಾಕಿಸ್ತಾನವೇ ಮೋದಿಗೆ ಹೆದರಬೇಕಾದರೇ ಇನ್ನು ಸಿದ್ದರಾಮಯ್ಯ ಯಾವ ಲೆಕ್ಕ ಎಂದು ಕೆ.ಎಸ್ ಈಶ್ವರಪ್ಪ ವ್ಯಂಗ್ಯ ವಾಡಿದ್ರು.
ಇದನ್ನೂ ಓದಿ :- ಬೆಲೆ ನಿಯಂತ್ರಣಕ್ಕೆ ಕಡಿವಾಣ ಹಾಕಲು RBI ವಿಫಲ- ಹಣದುಬ್ಬರ 7.41ಕ್ಕೆ ಏರಿಕೆ